ಮಂಗಳೂರು:ನಗರದ ಕೊಟ್ಟಾರ ಚೌಕಿಯಲ್ಲಿ ಬೆಳಗ್ಗೆವಾಕಿಂಗ್ ಮಾಡುತ್ತಿದ್ದ ಪಾದಚಾರಿ ಮೇಲೆ ಲಾರಿ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ನಡೆದಿದೆ. ಅಶೋಕನಗರದ ನಿವಾಸಿ ಅಶೋಕ್ (40) ಮೃತಪಟ್ಟವರು.
ಪಾದಚಾರಿ ಮೇಲೆ ಹರಿದ ಲಾರಿ: ಸ್ಥಳದಲ್ಲಿಯೇ ವ್ಯಕ್ತಿ ಸಾವು - Lorry with Haryana registration
ಮಂಗಳೂರು ನಗರದ ಕೊಟ್ಟಾರ ಚೌಕಿಯಲ್ಲಿ ಬೆಳಗ್ಗೆ ವಾಕಿಂಗ್ ಮಾಡುತ್ತಿದ್ದ ಪಾದಚಾರಿಯ ಮೇಲೆ ಲಾರಿ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ನಡೆದಿದೆ. ಅಶೋಕನಗರದ ನಿವಾಸಿ ಅಶೋಕ್ (40) ಸಾವಿಗೀಡಾದ ವ್ಯಕ್ತಿ.
![ಪಾದಚಾರಿ ಮೇಲೆ ಹರಿದ ಲಾರಿ: ಸ್ಥಳದಲ್ಲಿಯೇ ವ್ಯಕ್ತಿ ಸಾವು Lorry overturned](https://etvbharatimages.akamaized.net/etvbharat/prod-images/768-512-16747633-thumbnail-3x2-bk.jpg)
ಪಾದಚಾರಿ ಮೇಲೆ ಹರಿದ ಲಾರಿ
ಅಶೋಕ್ ಅವರು ತಮ್ಮ ಆ್ಯಕ್ಟಿವಾ ಬೈಕ್ ಅನ್ನು ರಸ್ತೆ ಬದಿ ನಿಲ್ಲಿಸಿ ಕೊಟ್ಟಾರದಲ್ಲಿ ವಾಕಿಂಗ್ ನಿರತರಾಗಿದ್ದರು. ಈ ವೇಳೆ ಹರಿಯಾಣದ ನೋಂದಣಿ ಇರುವ ಲಾರಿ ಅವರ ಮೇಲೆ ಹರಿದಿದೆ. ಲಾರಿ ಹರಿದ ಪರಿಣಾಮ ಪಾದಚಾರಿ ವ್ಯಕ್ತಿ ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಈ ಬಗ್ಗೆ ಸಂಚಾರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ: ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಕೆಎಸ್ಆರ್ಟಿಸಿ ಬಸ್: 25 ಮಂದಿಗೆ ಗಾಯ