ಮಂಗಳೂರು:ವ್ಯಕ್ತಿವೋರ್ವ ಆತ್ಮಹತ್ಯೆ ಮಾಡಿಕೊಳ್ಳಲು ಇಲ್ಲಿನ ಉಳ್ಳಾಲದ ನೇತ್ರಾವತಿ ಸೇತುವೆಯಿಂದ ಹಾರಿದ್ದಾರೆ.
ಉಳ್ಳಾಲ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ... ಆತ್ಮಹತ್ಯೆ ಶಂಕೆ
ಕಡಬ ನಿವಾಸಿ ಸದಾಶಿವ (29) ಉಳ್ಳಾಲ ಸೇತುವೆಯಿಂದ ಹಾರಿದ್ದಾರೆ. ಇವರು ಮೃತಪಟ್ಟಿರಬಹುದೆಂದು ಶಂಕಿಸಿ ಶವಕ್ಕಾಗಿ ಶೋಧ ಕಾರ್ಯ ನಡೆದಿದೆ.
ನೇತ್ರಾವತಿ ಸೇತುವೆ
ಕಡಬ ನಿವಾಸಿ ಸದಾಶಿವ (29) ನದಿ ಹಾರಿದವರು. ಶುಕ್ರವಾರ ರಾತ್ರಿ 9.30 ರ ಸುಮಾರಿಗೆ ಇವರು ನೇತ್ರಾವತಿ ಸೇತುವೆಯಿಂದ ಹಾರಿದ್ದು, ಇನ್ನೂ ಪತ್ತೆಯಾಗಿಲ್ಲ. ಮೃತಪಟ್ಟಿರಬಹುದೆಂದು ಶಂಕಿಸಿ ಶವಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.
ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.