ಕರ್ನಾಟಕ

karnataka

By

Published : Feb 21, 2020, 6:35 AM IST

ETV Bharat / state

ದ್ವಿತೀಯ ಪಿಯು ಪರೀಕ್ಷೆ : ಪೂರ್ವಭಾವಿ ಸಭೆ ನಡೆಸಿದ ದ.ಕ. ಜಿಲ್ಲಾಧಿಕಾರಿ

ಮಾರ್ಚ್ ತಿಂಗಳಿನಲ್ಲಿ ಪಿಯು ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಪೂರ್ವ ಸಿದ್ಧತೆಯನ್ನು ಮಾಡಿಕೊಳುವಂತೆ ಜಿಲ್ಲೆಯ ಶಿಕ್ಷಣಾಧಿಕಾರಿಗಳಿಗೆ ದಕ್ಷಿಣ ಕನ್ನಡಿ ಡಿಸಿ ಸಿಂಧೂ ಬಿ ರೂಪೇಶ್ ಸೂಚಿಸಿದರು.

mangalore-dc-conducted-meeting-in-dakshin-kannad
ದ್ವಿತೀಯ ಪಿಯುಸಿ ಪರೀಕ್ಷೆ

ಮಂಗಳೂರು: ಮಾರ್ಚ್ ತಿಂಗಳಿನಲ್ಲಿ ಪಿಯು ಪರೀಕ್ಷೆಗೆ ಎಲ್ಲಾ ರೀತಿಯ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಸಂಭಾಗಣದಲ್ಲಿ ನಡೆದ ದ್ಚಿತೀಯ ಪಿಯು ಪರೀಕ್ಷೆ ಪೂರ್ವ ಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳಿವೆ. ಮಂಗಳೂರು 24, ಮೂಡಬಿದ್ರೆ 11, ಪುತ್ತೂರು 9, ಬೆಳ್ತಂಗಡಿ 4 ಹಾಗೂ ಸುಳ್ಯ 3 ಪರೀಕ್ಷಾ ಕೇಂದ್ರಗಳನ್ನು ಹೊಂದಿದೆ ಎಂದರು.

ಪರೀಕ್ಷೆಗೆ 17,137 ಬಾಲಕರು ಮತ್ತು 17,209 ಬಾಲಕಿಯರು ಹಾಜರಾಗಲಿದ್ದಾರೆ. ಪರೀಕ್ಷೆಗೆ ಒಟ್ಟು 34,346 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕಲಾ ವಿಭಾಗದಲ್ಲಿ 4,532 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 16,237 ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿಭಾಗದಲ್ಲಿ 13,577 ವಿದ್ಯಾರ್ಥಿಗಳು ಇರಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಸಹಾಯಕ ಆಯುಕ್ತ ಮದನ್ ಮೋಹನ್, ಡಿಡಿಪಿಯು ವಿಷ್ಣು ಮೂರ್ತಿ, ಡಿಪಿಪಿಐ ಮಲ್ಲೇಶಪ್ಪ, ಇಲಾಖೆಯ ಅಧಿಕಾರಿಗಳು, ಕಾಲೇಜು ಮುಖ್ಯಸ್ಥರು ಉಪಸ್ಥಿತರಿದ್ದರು.

ABOUT THE AUTHOR

...view details