ಕರ್ನಾಟಕ

karnataka

ETV Bharat / state

ಮಂಗಳೂರು: ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ‌ ಅವಘಡ

ಕಾರು ನಿಲ್ಲಿಸಿ ಮಾಲೀಕ ಜ್ಯೂಸ್​ ಕುಡಿಯಲು ಹೋಗಿದ್ದ ವೇಳೆ ಕಾರಿನ ಎಸಿ ಭಾಗದಲ್ಲಿ ಶಾರ್ಟ್​ ಸರ್ಕ್ಯೂಟ್​ ಆಗಿದೆ.

By

Published : Nov 26, 2022, 5:02 PM IST

Fire broke out in parked car
ನಿಲ್ಲಿಸಿದ್ದ ಕಾರಿನಲ್ಲಿ ಬೆಂಕಿ‌ ಅವಘಡ

ಮಂಗಳೂರು:ನಿಲ್ಲಿಸಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಮಧ್ಯಾಹ್ನ ಮಂಗಳೂರಿನ ಬಲ್ಮಠದ ಜ್ಯೂಸ್ ಜಂಕ್ಷನ್ ಬಳಿ ನಡೆದಿದೆ. ಕಾರಿನ ಮಾಲೀಕರು ಬಲ್ಮಠದ ಜ್ಯೂಸ್ ಜಂಕ್ಷನ್ ಬಳಿ ಕಾರು ನಿಲ್ಲಿಸಿ ಜ್ಯೂಸ್ ಕುಡಿಯಲು ಹೋಗಿದ್ದರು. ಈ ವೇಳೆ, ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.

ಫೋರ್ಡ್ ಕಾರಿನ ಎಸಿ ಭಾಗದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಘಟನೆಯಿಂದ ಕಾರಿನ ಮುಂಭಾಗ ಸಂಪೂರ್ಣ ಹಾನಿಯಾಗಿದೆ.

ಇದನ್ನೂ ಓದಿ:ಆಟೋದಲ್ಲಿ ಸ್ಫೋಟ ಪ್ರಕರಣ: ಮೈಸೂರಿನಲ್ಲಿ ಮೂವರು ಪೊಲೀಸ್‌ ವಶಕ್ಕೆ

ABOUT THE AUTHOR

...view details