ಕರ್ನಾಟಕ

karnataka

ETV Bharat / state

ವ್ಯಾಪಾರದಲ್ಲಿ ಅತಿ ವೇಗದಲ್ಲಿ ಪ್ರಗತಿ ಕಂಡ ಸಾಂಸ್ಕೃತಿಕ ನಗರ ಮಂಗಳೂರು: ವಜುಭಾಯಿ ವಾಲಾ - undefined

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಭವನ ವಿಸ್ತರಣಾ ಕಾರ್ಯಕ್ರಮವನ್ನು ರಾಜ್ಯಪಾಲ ವಜುಭಾಯಿ ವಾಲಾ ನೆರವೇರಿಸಿದರು.

ರಾಜ್ಯಪಾಲ ವಜುಭಾಯಿ ವಾಲಾ

By

Published : Feb 23, 2019, 7:54 AM IST

ಮಂಗಳೂರು: ಬಜ್ಪೆಯಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಭವನ ವಿಸ್ತರಣಾ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಭಾಗವಹಿಸಿದ್ದರು.

ಇದೇ ವೇಳೆ ಮಾತನಾಡಿದ ಅವರು, ಅನೇಕ ವರ್ಷಗಳಿಂದ ವ್ಯಾಪಾರದಲ್ಲಿ ಎಲ್ಲರಿಗಿಂತಲೂ ವೇಗದಲ್ಲಿ ಪ್ರಗತಿ ಕಂಡ ಸಾಂಸ್ಕೃತಿಕ ನಗರ ಮಂಗಳೂರು. ಇಲ್ಲಿ ವ್ಯಾಪಾರದ ಬಹುದೊಡ್ಡ ಕೇಂದ್ರಗಳಿದ್ದು, ವ್ಯಾಪಾರ ಮಾಡುವುದಗೋಸ್ಕರ ಇಲ್ಲಿಗೆ ದೇಶ ವಿದೇಶಗಳಿಂದ ದೊಡ್ಡ ದೊಡ್ಡ ವ್ಯಾಪಾರಸ್ಥರು ಆಗಮಿಸುತ್ತಿರುತ್ತಾರೆ. ಆದ್ದರಿಂದ ಕರ್ನಾಟಕದಲ್ಲಿಯೇ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು‌ ಉತ್ತಮ ರೀತಿಯಲ್ಲಿ ಅಭಿವೃದ್ಧಿ ಮಾಡಲು ಇಂದು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

ಈ ದೇಶದಲ್ಲಿ ಕೈಗಾರಿಕಾ ಅಭಿವೃದ್ಧಿ ಆಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನಗಳ ಅಭಿವೃದ್ಧಿ ಆಗಿದೆ. ಈ ಎರಡರ ಅಭಿವೃದ್ಧಿ ಎಲ್ಲಿ ಆಗುತ್ತದೆಯೋ, ಆ ದೇಶ ಅಥವಾ ರಾಜ್ಯ ವಿಕಾಸ ಹೊಂದಿದಂತೆ. ಅಲ್ಲಿ ಎಲ್ಲವೂ ಅಭಿವೃದ್ಧಿ ಹೊಂದಿದಂತೆ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸತ್ ಸದಸ್ಯ ನಳಿನ್ ಕುಮಾರ್ ಕಟೀಲು, ಮನಪಾ ಮೇಯರ್ ಭಾಸ್ಕರ ಕೆ. ಮುಲ್ಕಿ, ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಭಾಗಿಯಾಗಿದ್ದರು.

For All Latest Updates

TAGGED:

ABOUT THE AUTHOR

...view details