ಕರ್ನಾಟಕ

karnataka

ETV Bharat / state

ಶ್ರೀಘ್ರ ಮಳೆಗಾಗಿ ಶಾಸಕ ವೇದವ್ಯಾಸ ಕಾಮತ್​ರಿಂದ ಟೆಂಪಲ್​ ರನ್​... ವಿಶೇಷ ಪ್ರಾರ್ಥನೆ - undefined

ಎಲ್ಲೆಡೆ ಬೇಸಿಗೆಯ ಬಿಸಿ ಹೆಚ್ಚಾಗಿದ್ದು ಜೊತೆಗೆ ನೀರಿನ ಅಭಾವ ಕೂಡಾ ಉಂಟಾಗಿದೆ. ಮಂಗಳೂರು ನಗರದಲ್ಲೂ ನೀರಿನ ಕೊರತೆ ಉದ್ಭವಿಸಿದ್ದು, ಶೀಘ್ರದಲ್ಲೇ ವರುಣ ಕೃಪೆ ತೋರಲೆಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ವಿವಿಧ ದೇವಳಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಶಾಸಕ ವೇದವ್ಯಾಸ ಕಾಮತ್

By

Published : May 16, 2019, 3:15 AM IST

ಮಂಗಳೂರು: ನಗರದಲ್ಲಿ ಕುಡಿಯುವ ನೀರಿನ ಕೊರತೆ ಉದ್ಭವಿಸಿದ್ದು, ಶೀಘ್ರದಲ್ಲಿ ಮಳೆ ಬರಲು ದೇವರು ಅನುಗ್ರಹಿಸಬೇಕು ಎಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ವಿವಿಧ ದೇವಳಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಶ್ರೀಘ್ರ ಮಳೆಗಾಗಿ ಶಾಸಕ ವೇದವ್ಯಾಸ ಕಾಮತ್​ರಿಂದ ಟೆಂಪಲ್​ ರನ್

ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ ಶಾಸಕ ವೇದವ್ಯಾಸ ಕಾಮತ್, ಮಧ್ಯಾಹ್ನದ ಮಹಾಪೂಜೆಯಲ್ಲಿ ಭಾಗವಹಿಸಿ ದೇವಿಯಲ್ಲಿ ಶೀಘ್ರ ಮಳೆಗಾಗಿ ಪ್ರಾರ್ಥಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು, ಸಂಕ್ರಮಣದ ಈ ಪರ್ವ ದಿನದಂದು ನಗರದ ಎಲ್ಲಾ ದೇವಸ್ಥಾನಗಳಲ್ಲಿ ಭಜಕರು, ಆಡಳಿತ ಮಂಡಳಿ ಸದಸ್ಯರು, ಪಕ್ಷದ ಕಾರ್ಯಕರ್ತರು ಸೇರಿ ಮಳೆಗಾಗಿ ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸಿದ್ದೇವೆ. ಮಂಗಳೂರಿಗೆ ಹೆಸರು ಬರಲು ಕಾರಣವಾಗಿರುವ ಮಂಗಳಾಂಬೆಯ ಸನ್ನಿಧಿಯಲ್ಲಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದೇವೆ. ಹಿಂದೆ ಈ ರೀತಿ ನೀರಿನ ಕೊರತೆಉಂಟಾದಾಗ ನಮ್ಮ ಹಿರಿಯರು ದೇವರನ್ನು ಪ್ರಾರ್ಥಿಸಿದಾಗ ಮಳೆ ಬಂದು ತೊಂದರೆಗಳು ದೂರವಾಗಿದ್ದವು ಎನ್ನುವುದು ನಮಗೆ ಗೊತ್ತೆ ಇದೆ. ಈಗ ಮಳೆಯಿಲ್ಲದೆ ನಾವು ಪಡುತ್ತಿರುವ ಸಂಕಟವನ್ನು ದೇವಿಯ ಮುಂದೆ ಹೇಳಿಕೊಂಡಿದ್ದೇವೆ. ದೇವಿ ಕಾಪಾಡುತ್ತಾಳೆ ಎನ್ನುವ ನಂಬಿಕೆ ಇದೆ ಎಂದು ಹೇಳಿದರು.

ವಿಶೇಷ ಪೂಜೆ ಸಲ್ಲಿಸಿದ ಮಂಗಳೂರು ಶಾಸಕ ವೇದವ್ಯಾಸ ಕಾಮತ್

ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಕ್ಕೆ ಮಧ್ಯಾಹ್ನ ವೇಳೆಗೆ ಆಗಮಿಸಿದ ಶಾಸಕರು ಭಕ್ತವೃಂದದೊಂದಿಗೆ ಮಹಾಪೂಜೆಯಲ್ಲಿ ಭಾಗವಹಿಸಿ ನಂತರ ಪ್ರಸಾದ ಸ್ವೀಕರಿಸಿದರು. ಬಳಿಕ ಕಂಕನಾಡಿಯ ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ಶಾಸಕರೊಂದಿಗೆ ಪಾಲಿಕೆ ಮಾಜಿ ಸದಸ್ಯ ಪ್ರೇಮಾನಂದ ಶೆಟ್ಟಿ, ವಿಜಯಕುಮಾರ್ ಶೆಟ್ಟಿ, ಬಿಜೆಪಿ ಮುಖಂಡರಾದ ವಸಂತ ಜೆ. ಪೂಜಾರಿ, ಪ್ರಭಾಮಾಲಿನಿ,ರಮೇಶ್ ಕಂಡೆಟ್ಟು, ಭಾಸ್ಕರಚಂದ್ರ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು

.

For All Latest Updates

TAGGED:

ABOUT THE AUTHOR

...view details