ಕರ್ನಾಟಕ

karnataka

ETV Bharat / state

ಮಂಗಳೂರು ಸ್ಫೋಟ ಪ್ರಕರಣ: ಗಾಯಾಳು ಚೇತರಿಕೆ.. ಆರೋಪಿ ಶಾರೀಕ್​ನ ವಿಚಾರಣೆ - ಎನ್ಐಎ

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಗಾಯಾಳು ಪುರುಷೋತ್ತಮ ಆರೋಗ್ಯ ಸುಧಾರಿಸಿದೆ. ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಾಗಿ ವೈದ್ಯರು ಹೇಳಿದ್ದಾರೆ. ಇದೇ ವೇಳೆ, ಆರೋಪಿ ಶಾರೀಕ್​ನನ್ನು ಕಾಲ ವಿಚಾರಣೆ ನಡೆಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ‌ಆಯುಕ್ತ ಶಶಿಕುಮಾರ್ ಹೇಳಿದರು.

mangaluru-blast-case-injured-shifted-from-icu-to-special-ward
ಮಂಗಳೂರು ಸ್ಫೋಟ ಪ್ರಕರಣ: ಗಾಯಾಳು ಚೇತರಿಕೆ... ಆರೋಪಿ ಶಾರೀಕ್​ನ ವಿಚಾರಣೆ

By

Published : Dec 1, 2022, 3:23 PM IST

ಮಂಗಳೂರು:ನಗರದಹೊರವಲಯದಲ್ಲಿ ನಡೆದಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಾಯಾಳು ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಚೇತರಿಸಿಕೊಳ್ಳುತ್ತಿದ್ದು, ಐಸಿಯುವಿನಿಂದ ಸ್ಪೆಷಲ್ ವಾರ್ಡ್​ಗೆ ಶಿಫ್ಟ್​ ಮಾಡಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ‌ಆಯುಕ್ತ ಶಶಿಕುಮಾರ್ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಯಾಳು ಪುರುಷೋತ್ತಮ ಆರೋಗ್ಯ ಸುಧಾರಿಸಿದೆ. ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಾಗಿ ವೈದ್ಯರು ಹೇಳಿದ್ದಾರೆ. ಇದೇ ವೇಳೆ, ಆರೋಪಿ ಶಾರೀಕ್​ ವೆಂಟಿಲೇಟರ್​ನಲ್ಲಿದ್ದ ಕಾರಣ ಆತನನ್ನು ವಿಚಾರಣೆ ನಡೆಸಲು ಸಾಧ್ಯವಾಗಿರಲಿಲ್ಲ. ನಿನ್ನೆ ವೈದ್ಯರು ಅನುಮತಿ ನೀಡಿದ ಹಿನ್ನೆಲೆಯಲ್ಲಿ ಆತನನ್ನು ಕೆಲ ಹೊತ್ತುಗಳ ಕಾಲ ವಿಚಾರಣೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ಮಂಗಳೂರು ಸ್ಫೋಟ ಪ್ರಕರಣ: ಗಾಯಾಳು ಚೇತರಿಕೆ... ಆರೋಪಿ ಶಾರೀಕ್​ನ ವಿಚಾರಣೆ

ಈ ಸ್ಫೋಟ ಪ್ರಕರಣವನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅನ್ವಯ ತನಿಖೆ ನಡೆಸಲಾಗುತ್ತಿದೆ. ಇದೀಗ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಗೆ ಹಸ್ತಾಂತರಿಸಬೇಕು ಎಂದು ಡಿಜಿಪಿಯಿಂದ ಸೂಚನೆ ಬಂದಿರುವ ಹಿನ್ನೆಲೆಯಲ್ಲೆ ಇಂದು ಎನ್ಐಎಗೆ ಹಸ್ತಾಂತರಿಸಲಾಗಿದೆ. ಎನ್‌ಐಎ ಅಧಿಕಾರಿಗಳ ನಿರ್ದೇಶನದನ್ವಯ ತನಿಖೆ ಮುಂದುವರಿಸಲಾಗುತ್ತದೆ. ಎನ್ಐಎ ಸಹಾಯಕ್ಕೆ ಆಯ್ದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ:ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಎನ್​ಐಎಗೆ ಹಸ್ತಾಂತರ, ದಾಖಲೆ ಪಡೆದ ಅಧಿಕಾರಿಗಳು

ABOUT THE AUTHOR

...view details