ಕರ್ನಾಟಕ

karnataka

ETV Bharat / state

ಸ್ವಯಂ ಕ್ವಾರೆಂಟೈನ್​ಗೆ ಒಳಗಾದ ಮಂಗಳೂರು ಡಿಸಿ - Mangaluru DC self-quarantine

ಮಂಗಳೂರು ಅಪರ ಜಿಲ್ಲಾಧಿಕಾರಿಗೆ ಕೊರೊನಾ ಸೋಂಕು ದೃಢಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ವರ್ಕ್ ಫ್ರಂ ಹೋಂ ಮಾಡುವಂತೆ ಸೂಚಿಸಲಾಗಿದೆ.

Mangaluru DC goes into self-quarantine after tests coronavirus positive
ಸ್ವಯಂ ಕ್ವಾರೆಂಟೈನ್​ಗೆ ಒಳಗಾದ ಮಂಗಳೂರು ಜಿಲ್ಲಾಧಿಕಾರಿ

By

Published : Sep 25, 2020, 11:06 PM IST

ಮಂಗಳೂರು : ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಸ್ವಯಂ ಕ್ವಾರೆಂಟೈನ್​ಗೆ ಒಳಗಾಗಿದ್ದಾರೆ. ಅಪರ ಜಿಲ್ಲಾಧಿಕಾರಿಗೆ ಕೊರೊನಾ ಸೋಂಕು ದೃಢಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ವರ್ಗಕ್ಕೆ ಮನೆಯಿಂದಲೇ ಕೆಲಸ ಮಾಡುವಂತೆ ತಿಳಿಸಲಾಗಿದೆ.

ಅಲ್ಲದೇ, ಜಿಲ್ಲಾಧಿಕಾರಿಯೂ ಸಹ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯನ್ನು ಸಂಪೂರ್ಣ ಸ್ಯಾನಿಟೇಶನ್ ಮಾಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ವರ್ಕ್ ಫ್ರಂ ಹೋಂ ಮಾಡುವಂತೆ ಸೂಚಿಸಲಾಗಿದೆ.

ಕೊರೊನಾ ಸೋಂಕು ದಿನೇ ದಿನೆ ಹೆಚ್ಚುತ್ತಿದ್ದು, ಜನತೆಯನ್ನು ಇನ್ನಿಲ್ಲದೇ ಕಾಡುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಯಾರೊಬ್ಬರನ್ನೂ ಬಿಡದೆ ಕೊರೊನಾ ಕಾಟ ಕೊಡುತ್ತಿದೆ.

ABOUT THE AUTHOR

...view details