ಕರ್ನಾಟಕ

karnataka

ಕ್ವಾರಂಟೈನ್ ನಿಯಮ ಮುರಿದರೇ ಕಾಂಗ್ರೆಸ್‌ ಮುಖಂಡ ಮಿಥುನ್ ರೈ?

ಕ್ವಾರಂಟೈನ್​​ನಲ್ಲಿ‌ರಬೇಕಾದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ‌ ಮಿಥುನ್ ರೈ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜತೆ ಕಾಣಿಸಿಕೊಂಡಿದ್ದಾರೆ.

By

Published : Jul 31, 2020, 9:07 PM IST

Published : Jul 31, 2020, 9:07 PM IST

Mithun Rai broke the Quarantine rule
ಡಿಕೆಶಿ ಜೊತೆ ಮಿಥುನ್ ರೈ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ‌ ಮಿಥುನ್ ರೈ ಕ್ವಾರಂಟೈನ್ ನಿಯಮವನ್ನು ಉಲ್ಲಂಘಿಸಿದ್ದಾರೆಯೇ? ಎಂಬ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿದೆ‌.

ಕ್ವಾರಂಟೈನ್​​ನಲ್ಲಿ‌ರಬೇಕಾದ ರೈ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ದ.ಕ. ಜಿಲ್ಲಾ ಪ್ರವಾಸ ಕೈಗೊಂಡಿರುವುದರಿಂದ ಅವರ ಜತೆ ಕಾಣಿಸಿಕೊಂಡಿದ್ದಾರೆ.

ಡಿಕೆಶಿ ಜತೆ ಮಿಥುನ್ ರೈ

ಜುಲೈ 17ರಂದು ತಮಗೆ ಕೊರೊನಾ ಸೋಂಕು ದೃಢಗೊಂಡಿದ್ದು, ಬೆಂಗಳೂರಿನಲ್ಲಿ ‌ಕ್ವಾರಂಟೈನ್​ಗೆ ಒಳಗಾಗಿದ್ದೇನೆ ಎಂದು ಮಿಥುನ್ ರೈ ಟ್ವೀಟ್ ಮಾಡಿ ತಿಳಿಸಿದ್ದರು.

ಬಳಿಕ‌ ಎಲ್ಲೂ ಕಾಣಿಸಿಕೊಳ್ಳದ ಅವರು, ಇಂದು‌ ಡಿಕೆಶಿಯವರ ಮಂಗಳೂರು ಭೇಟಿಯ ವೇಳೆ ಅವರ ಜತೆ ಕಾಣಿಸಿಕೊಂಡಿದ್ದಾರೆ. ಸರ್ಕಾರದ ನಿಯಮದಂತೆ ಕೊರೊನಾ ಸೋಂಕು ದೃಢಗೊಂಡಿರುವ ವ್ಯಕ್ತಿ ಕನಿಷ್ಠ 17 ದಿನಗಳ‌ ಕಾಲ ಕ್ವಾರಂಟೈನ್​​ಗೆ ಒಳಗಾಗುವುದು ಕಡ್ಡಾಯ. ಆದರೆ ಮಿಥುನ್ ರೈ 14 ದಿನದಲ್ಲೇ ಕ್ವಾರಂಟೈನ್ ನಿಯಮ ಮುರಿದಿದ್ದಾರೆಯೇ? ಎಂಬ ವಿಚಾರ ಚರ್ಚೆಗೊಳಗಾಗಿದೆ.

ABOUT THE AUTHOR

...view details