ಕರ್ನಾಟಕ

karnataka

ETV Bharat / state

ಪ್ರಾಕೃತಿಕ ದುರಂತಗಳು ಸಂಭವಿಸದಂತೆ ತಡೆಯಲು ಅಧಿಕಾರಿಗಳಿಗೆ ಶಾಸಕ ಎಸ್. ಅಂಗಾರ ಸೂಚನೆ - Sulya MLA S Angara

ಮಳೆಗಾಲದಲ್ಲಿ ಉಂಟಾಗುವ ಪ್ರಾಕೃತಿಕ ದುರಂತಗಳು ಸಂಭವಿಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಪ್ರಾಕೃತಿಕ ವಿಕೋಪ ಕಾರ್ಯಾಪಡೆಯನ್ನು ರಚಿಸಬೇಕು ಎಂದು ಶಾಸಕ ಎಸ್.ಅಂಗಾರ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

Natural Disaster and Emergency Overview Meeting
ಪ್ರಾಕೃತಿಕ ವಿಕೋಪ ಮತ್ತು ತುರ್ತುಪರಿಸ್ಥಿತಿ ಅವಲೋಕನ ಸಭೆ

By

Published : May 30, 2020, 3:56 PM IST

ಸುಳ್ಯ: ಮಳೆಗಾಲದಲ್ಲಿ ಉಂಟಾಗುವ ಪ್ರಾಕೃತಿಕ ದುರಂತಗಳು ಸಂಭವಿಸುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಪ್ರಾಕೃತಿಕ ವಿಕೋಪ ಕಾರ್ಯಾಪಡೆ ರಚಿಸಬೇಕು. ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಕಾರ್ಯನಿರ್ವಹಣೆ ಮಾಡಬೇಕು, ಅಧಿಕಾರಿಗಳು ರಜೆ ಮಾಡುವುದಿದ್ದರೆ ಮೊದಲೇ ತಿಳಿಸಬೇಕು ಎಂದು ಶಾಸಕ ಎಸ್.ಅಂಗಾರ ಹೇಳಿದರು.

ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಾಕೃತಿಕ ವಿಕೋಪ ಮತ್ತು ತುರ್ತುಪರಿಸ್ಥಿತಿ ಅವಲೋಕನ ಸಭೆಯಲ್ಲಿ ಮಾತನಾಡಿದ ಅವರು, ನಗರ ವ್ಯಾಪ್ತಿಯಲ್ಲಿರುವ ಚರಂಡಿಗಳನ್ನು ನಗರ ಪಂಚಾಯತ್ ಕೂಡಲೇ ಸ್ವಚ್ಚ ಮಾಡುವ ಕೆಲಸ ಮಾಡಬೇಕು. ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿ ಸಂಪರ್ಕ ರಸ್ತೆಗಳ ಚರಂಡಿಗಳನ್ನು ಮಳೆನೀರು ಹರಿಯುವಂತೆ ಸರಿಪಡಿಸಬೇಕು. ರಸ್ತೆ ಮತ್ತು ಮನೆಗಳ ಹತ್ತಿರ ಇರುವ ಅಪಾಯಕಾರಿ ಮರಗಳ ತೆರವಿಗೆ ಸೂಚನೆ ನೀಡಿದರು.

ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ಗೃಹರಕ್ಷಕ ದಳಕ್ಕೆ ಬೇಕಾಗುವ ಅಗತ್ಯ ಸಲಕರಣೆಗಳ ಹಾಗೂ ಅಗ್ನಿಶಾಮಕ ದಳದ ಯಾಂತ್ರೀಕೃತ ಬೋಟ್ ವ್ಯವಸ್ಥೆ ಮಾಡಲು ಅಂದಾಜು ವೆಚ್ಚದ ಪಟ್ಟಿ ನೀಡಿ, ಅದನ್ನು ಒದಗಿಸುವ ವ್ಯವಸ್ಥೆ ಮಾಡುತ್ತೇವೆ ಎಂದು ಶಾಸಕರು ಹೇಳಿದರು.

ಸಭೆಯಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ತಹಶೀಲ್ದಾರ್ ಅನಂತ್ ಶಂಕರ್, ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಭವಾನಿ ಶಂಕರ್, ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ABOUT THE AUTHOR

...view details