ಕರ್ನಾಟಕ

karnataka

ಲಾಕ್‌ಡೌನ್ ಸಡಿಲಿಕೆಯಾದ್ರೂ ಮಂಗಳೂರಿನಲ್ಲಿ ರಸ್ತೆಗಿಳಿಯದ ಬಸ್​ಗಳು

By

Published : Jun 21, 2021, 12:17 PM IST

ರಾಜ್ಯದಲ್ಲಿ ಅನ್​ಲಾಕ್​ ಪ್ರಕ್ರಿಯೆ ಪ್ರಾರಂಭವಾಗಿದ್ದು, ಹಲವಾರು ಜಿಲ್ಲೆಗಳಲ್ಲಿ ಅದಾಗಲೇ ಬಸ್​ ಸಂಚಾರವೂ ಆರಂಭವಾಗಿದೆ. ಆದರೆ ದಕ್ಷಿಣ ಕನ್ನಡದಲ್ಲಿ ಲಾಕ್​ಡೌನ್​ ಸಡಿಲಿಕೆಯಾಗಿದ್ರೂ ಕೂಡಾ ಬಸ್​ಗಳು ಮಾತ್ರ ಇನ್ನೂ ಡಿಪೋ ಬಿಟ್ಟಿಲ್ಲ.

Dakshina kannada
ಮಂಗಳೂರು

ಮಂಗಳೂರು: ಲಾಕ್ ಡೌನ್ ಸಡಿಲಿಕೆ ‌ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೆಎಸ್ಆರ್​ಟಿಸಿಯ ಎಲ್ಲಾ ಪ್ರಕಾರಗಳ ಬಸ್ ರಾತ್ರಿ ಕರ್ಫ್ಯೂ ಅವಧಿಯಲ್ಲಿ ಹೊರತುಪಡಿಸಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಆದರೆ ದ.ಕ.ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆಯಾದರೂ ಇನ್ನೂ ಬಸ್ ಸಂಚಾರ ಅವಕಾಶ ದೊರಕಿಲ್ಲ.

ರೋಡಿಗಿಳಿಯದ ಬಸ್​ಗಳು

ದ.ಕ.ಜಿಲ್ಲಾಧಿಕಾರಿ ಎರಡನೇ ಹಂತದ ಸಡಿಲಿಕೆ ಆದೇಶ ಹೊರಡಿಸಿದ್ದರೂ, ಜಿಲ್ಲೆಯ ಒಳಗೆ ಬಸ್ ಸಂಚಾರಕ್ಕೆ ಅವಕಾಶ ನೀಡಿಲ್ಲ. ಆದ್ದರಿಂದ ಎಲ್ಲಾ ಬಸ್​ಗಳು ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ನಿಂತಿದ್ದು, ಯಾವುದೇ ಬಸ್​ಗಳು ಸಂಚಾರ ಮಾಡುತ್ತಿಲ್ಲ. ಆದರೆ ಕೋವಿಡ್ ಕಾರ್ಯಕ್ಕೆ ನಿಯೋಜಿಸಲಾಗಿರುವ ಬಸ್ ಗಳಿಗೆ ಸಂಚರಿಸಲು ಅವಕಾಶ ನೀಡಲಾಗಿದೆ. ಹಾಗಾಗಿ ಆ ಬಸ್​ಗಳು ಮಾತ್ರ ಸಂಚಾರ ಮಾಡುತ್ತಿವೆ.

ABOUT THE AUTHOR

...view details