ಕರ್ನಾಟಕ

karnataka

ETV Bharat / state

ಮುಸ್ಲಿಂ ಸೆಂಟ್ರಲ್​​​ ಕಮಿಟಿ ಸಮಾವೇಶಕ್ಕೆ ಸಿಗದ ಅವಕಾಶ: ಮಂಗಳೂರಲ್ಲಿ ಪೊಲೀಸ್​​​ ಬಂದೋಬಸ್ತ್​​​ - Latest News For mangalore

ಮುಸ್ಲಿಂ ಸೆಂಟ್ರಲ್ ಕಮಿಟಿ ಹಮ್ಮಿಕೊಂಡಿದ್ದ ಸಮಾವೇಶ ರದ್ದುಗೊಂಡ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ನಗರದಲ್ಲಿ ಬಂದೋಬಸ್ತ್​ ಮಾಡಿಕೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

muslim-central-committee-conference
ಮಂಗಳೂರಲ್ಲಿ ಬಂದೋಬಸ್ತ್​

By

Published : Jan 4, 2020, 2:01 PM IST

ಮಂಗಳೂರು: ಪೊಲೀಸರ ಅನುಮತಿ ನಿರಾಕರಣೆ ಹಿನ್ನೆಲೆಯಲ್ಲಿ ಇಂದು ಮುಸ್ಲಿಂ ಸೆಂಟ್ರಲ್ ಕಮಿಟಿ ಹಮ್ಮಿಕೊಂಡಿದ್ದ ಸಮಾವೇಶ ರದ್ದುಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಮಂಗಳೂರಲ್ಲಿ ಬಂದೋಬಸ್ತ್​

ನಗರದ ಸ್ಟೇಟ್ ಬ್ಯಾಂಕ್ ವೃತ್ತದ ಬಳಿ ಇರುವ ಪೊಲೀಸ್ ಆಯುಕ್ತರ ಕಚೇರಿ ಹಾಗೂ ನೆಹರೂ ಮೈದಾನದ ಬಳಿಯಲ್ಲಿ ಸಾಕಷ್ಟು ಪೊಲೀಸರನ್ನು ನಿಯೋಜಿಸಿ ಭದ್ರತೆ ನೀಡಲಾಗಿದೆ.

ಭದ್ರತೆಗೆ ಆರ್​​ಎಎಫ್ 3 ತುಕಡಿ, ಕೆಎಸ್​ಆರ್​​ಪಿಯ 20 ತುಕಡಿಯನ್ನು ನಿಯೋಜಿಸಲಾಗಿದೆ. ಸಿಎಎ ವಿರುದ್ಧದ ಪ್ರತಿಭಟನೆ ಹಿನ್ನೆಲೆಯಲ್ಲಿ ಡಿ. 19ರಂದು 144 ಸೆಕ್ಷನ್ ಜಾರಿಗೊಳಿಸಿದ್ದರೂ ಅಂದು ಭಾರಿ ಹಿಂಸಾಚಾರ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಇದೀಗ ಮುನ್ನೆಚ್ಚರಿಕೆ ಕ್ರಮವಹಿಸಿ ನಗರದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಮಾಡಿಕೊಂಡಿದೆ. ಅಲ್ಲದೆ ಎಡಿಜಿಪಿ ಅಮರ್ ಕುಮಾರ್ ಪಾಂಡೆ ನಗರಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details