ಮಂಗಳೂರು:ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ದಾಸಕೋಡಿ ನಿವಾಸಿ ನಾರಾಯಣ ನಾಯ್ಕ್ (75 ) ಇಂದು ಸಂಜೆ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವೃದ್ಧ ಆತ್ಯಹತ್ಯೆಗೆ ಶರಣು
ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ದಾಸಕೋಡಿ ನಿವಾಸಿ ನಾರಾಯಣ ನಾಯ್ಕ್ (75) ಬುಧವಾರ ಸಂಜೆ ಮನೆಯ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತ ವ್ಯಕ್ತಿ 10-12 ವರ್ಷಗಳಿಂದ ಅಪಸ್ಮಾರ ಮತ್ತು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗ್ತಿದ್ದು, ಸುಮಾರು ವರ್ಷಗಳಿಂದ ಔಷಧಿಯನ್ನು ಕೊಡಿಸಿದ್ದರೂ ಗುಣಮುಖರಾಗಿರಲಿಲ್ಲ. ಇದೇ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಮೃತರ ಪತ್ನಿ 2 ವರ್ಷದ ಹಿಂದೆ ತೀರಿಕೊಂಡಿದ್ದರೆಂದು ತಿಳಿದು ಬಂದಿದ್ದು, ಇವರು 5 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಪುತ್ತೂರು ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷರಾದ ಶ್ರೀಧರ್, ಹೆಡ್ ಕಾನ್ಸ್ಟೇಬಲ್ ಜಯರಾಮ ಭೇಟಿ ನೀಡಿ ಮೃತದೇಹದ ಮಹಜರು ಮಾಡಿ ಮರಣೋತ್ತರ ಪರೀಕ್ಷೆಗೆ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಈ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.