ಕರ್ನಾಟಕ

karnataka

By

Published : Aug 11, 2020, 11:41 PM IST

ETV Bharat / state

ನಾಳೆಯಿಂದ ಚಾರ್ಮಾಡಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುವು!

ಮಳೆಯಿಂದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭೂಕುಸಿತವಾದ ಪರಿಣಾಮ ರಸ್ತೆ ಸಂಚಾರ ಬಂದ್ ಮಾಡಲಾಗಿತ್ತು. ಇದೀಗ ರಸ್ತೆ ತೆರವುಗೊಳಿಸಲಾಗಿದ್ದು, ಆ.12 ರಿಂದ ಲಘು ವಾಹನಗಳ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿದೆ.

Charmady Ghat
ಚಾರ್ಮಾಡಿಯಲ್ಲಿ ಲಘವಾಹನ ಸಂಚಾರಕ್ಕೆ ಅನುವು

ಮಂಗಳೂರು: ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭೂಕುಸಿತದ ಭಾಗಗಳನ್ನು ತೆರವುಗೊಳಿಸಲಾಗಿದ್ದು, ಆ.12(ನಾಳೆ) ರಿಂದ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ರವೆಗೆ ಲಘು ವಾಹನಗಳ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿದೆ.

ಚಾರ್ಮಾಡಿಯಲ್ಲಿ ಲಘವಾಹನ ಸಂಚಾರಕ್ಕೆ ಅನುವು

ಆದರೆ ಸಂಜೆ 7 ರಿಂದ ಬೆಳಗ್ಗೆ 7ರವರೆಗೆ ಸಂಚಾರ ನಿರ್ಬಂಧ ಮಾಡಲಾಗಿದೆ. ಅಲ್ಲದೆ ಭಾರೀ ವಾಹನಗಳ ಸಂಚಾರ ನಿರ್ಬಂಧ ಯಥಾ ಪ್ರಕಾರ ಮುಂದಿನ‌ ಆದೇಶದವರೆಗೆ ಚಾಲ್ತಿಯಲ್ಲಿರುತ್ತದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details