ಕರ್ನಾಟಕ

karnataka

By

Published : Dec 8, 2019, 3:09 PM IST

ETV Bharat / state

ಮಾದಕ ದ್ರವ್ಯ ಸೇವನೆ: ಇಬ್ಬರು ವ್ಯಸನಿಗಳ ಬಂಧನ

ನಿಷೇಧಿಸಲ್ಪಟ್ಟ ಮಾದಕ ದ್ರವ್ಯ ಸೇವಿಸಿದ ಇಬ್ಬರು ಆರೋಪಿಗಳನ್ನು ನಗರದ ಪಣಂಬೂರು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇಬ್ಬರು ಗಾಂಜಾ ವ್ಯಸನಿಗಳ ಬಂಧನ
marijuana accused

ಮಂಗಳೂರು:ನಿಷೇಧಿಸಲ್ಪಟ್ಟ ಮಾದಕ ದ್ರವ್ಯ ಸೇವಿಸಿದ ಇಬ್ಬರು ಆರೋಪಿಗಳನ್ನು ನಗರದ ಪಣಂಬೂರು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುರತ್ಕಲ್, ಮುಕ್ಕ ನಿವಾಸಿ ಮೊಹಮ್ಮದ್ ರಾಜಿಕ್ ಯಾನೆ ರಾಜಿಕ್ (32), ಚೇಳ್ಯಾರು ಎಮ್​ಆಎರ್​ಪಿಎಲ್​ ಕಾಲೋನಿ ನಿವಾಸಿ ನಿಖಿಲ್ (19) ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ನಗರ ಉತ್ತರ ಉಪ ವಿಭಾಗದ ಎಸಿಪಿ ಶ್ರೀನಿವಾಸ್​ ಗೌಡ ಆರ್. ನೇತೃತ್ವದ ರೌಡಿ ನಿಗ್ರಹ ದಳ ಕಾರ್ಯಾಚರಣೆ ನಡೆಸಿದ್ದು, ಮಾದಕ ದ್ರವ್ಯ ಸೇವನೆ ಮಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ತನಿಖೆಗಾಗಿ ಆರೋಪಿಗಳ ಪಣಂಬೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದ್ದು, ಆರೋಪಿಗಳ ಮೇಲೆ ಎನ್​ಡಿಪಿಎಸ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ABOUT THE AUTHOR

...view details