ಮಂಗಳೂರು : ಕರಾವಳಿಯ ವೀರ ಪುರುಷರಾದ ಕೋಟಿ ಚೆನ್ನಯ್ಯ ಮತ್ತು ಬಿಲ್ಲವರ ಬಗ್ಗೆ ಅಪಮಾನಕಾರಿಯಾಗಿ ಮಾತನಾಡಿದ್ದ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿಯುವವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ್ದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ಆ ಹಣವನ್ನು ಬಡ ವಿದ್ಯಾರ್ಥಿಗಳಿಗೆ ಹಂಚಿದ್ದಾರೆ.
ಕೋಟಿ ಚೆನ್ನಯ್ಯರ ಬಗ್ಗೆ ಬಿಜೆಪಿ ಮುಖಂಡ ಜಗದೀಶ್ ಅಧಿಕಾರಿ ಅಪಮಾನಕಾರಿಯಾಗಿ ಮಾತನಾಡಿದ್ದರು. ಈ ಹಿನ್ನೆಲೆ, ಅವರ ಮುಖಕ್ಕೆ ಮಸಿ ಬಳಿಯುವಂತೆ ಪ್ರತಿಭಾ ಕುಳಾಯಿ ಕರೆ ನೀಡಿದ್ದರು. ಆ ಬಳಿಕ ಜಗದೀಶ್ ಅಧಿಕಾರಿ ಕೋಟಿ ಚೆನ್ನಯ್ಯರ ಕ್ಷೇತ್ರಕ್ಕೆ ತೆರಳಿ ಕ್ಷಮೆಯಾಚಿಸಿದ್ದರು. ಅಧಿಕಾರಿ ಕ್ಷಮೆಯಾಚಿಸಿದ ಹಿನ್ನೆಲೆ, ಪ್ರತಿಭಾ ಕುಳಾಯಿ ಬಹುಮಾನವಾಗಿ ಘೋಷಿಸಿದ್ದ ಹಣವನ್ನು ಕೋಟಿ ಚೆನ್ನಯ್ಯರ ಮೂಲ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ, ಬಡ ವಿದ್ಯಾರ್ಥಿಗಳಿಗೆ ನೀಡುವುದಾಗಿ ಹೇಳಿದ್ದರು.