ಬಂಟ್ವಾಳ : ಮೀಟರ್ ರೀಡಿಂಗ್ ಗುತ್ತಿಗೆಯನ್ನು ಅತೀ ಕಡಿಮೆ ದರಕ್ಕೆ ನೀಡಿ ರೀಡರ್ಗಳನ್ನು ಕಡಿಮೆ ವೇತನಕ್ಕೆ ದುಡಿಸಲು ಮೆಸ್ಕಾಂ ಹುನ್ನಾರ ನಡೆಸುತ್ತಿದೆ ಎಂದು ಆರೋಪಿಸಿ ಹಾಗೂ ತಡೆ ಹಿಡಿದಿರುವ ವೇತನ ಬಿಡುಗಡೆಗೆ ಆಗ್ರಹಿಸಿ ಮೀಟರ್ ರೀಡರ್ಗಳು ಬಿ.ಸಿ ರೋಡಿನ ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೆಸ್ಕಾಂ ಮೀಟರ್ ರೀಡರ್ಗಳಿಂದ ಪ್ರತಿಭಟನೆ - ಬಂಟ್ವಾಳದಲ್ಲಿ ಮೆಸ್ಕಾಂ ಮೀಟರ್ ರೀಡರ್ಗಳಿಂದ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮತ್ತು ವೇತನ ಪಾವತಿಗೆ ಒತ್ತಾಯಿಸಿ ಮೀಟರ್ ರೀಡರ್ಗಳು ಬಿ.ಸಿ ರೋಡಿನ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆ ಉದ್ದೇಶಿಸಿ ದ.ಕ.ಜಿಲ್ಲಾ ದಲಿತ ಸೇವಾ ಸಮಿತಿ ಜಿಲ್ಲಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡು ಮಾತನಾಡಿದರು. ನಮ್ಮ ಬೇಡಿಕೆ ಈಡೇರುವವರೆಗೆ ಮೀಟರ್ ರೀಡಿಂಗ್ ಮಷಿನ್ ಅನ್ನು ಮೆಸ್ಕಾಂಗೆ ನೀಡುವುದಿಲ್ಲ. ಮುಂದೆ ಬೇಡಿಕೆ ಈಡೇರದಿದ್ದರೆ ದೊಡ್ಡ ಮಟ್ಟದ ಹೋರಾಟ ನಡೆಸಲಿದ್ದೇವೆ ಎಂದು ಎಚ್ಚರಿಸಿದರು. ಈ ವೇಳೆ ಮೆಸ್ಕಾಂ ಇಇಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಬೆಳ್ತಂಗಡಿ ಮತ್ತು ಪುತ್ತೂರು ತಾಲೂಕಿನ ಮೀಟರ್ ರೀಡರ್ಗಳು, ಪ್ರಮುಖರಾದ ಗೋಪಾಲ ನೇರಳಕಟ್ಟೆ, ಜಯರಾಮ್ ಬಂಟ್ವಾಳ, ಗೋಪಾಲಕೃಷ್ಣ ಬಂಟ್ವಾಳ, ಸದಾಶಿವ ಬಂಟ್ವಾಳ, ಮೋನಪ್ಪ ಬೆಳ್ತಂಗಡಿ, ರಮೇಶ್ ಬೆಳ್ತಂಗಡಿ, ಉದಯಕುಮಾರ್ ವಿಟ್ಲ ಪಾಲ್ಗೊಂಡಿದ್ದರು.