ಕರ್ನಾಟಕ

karnataka

By

Published : Jun 29, 2020, 4:00 PM IST

ETV Bharat / state

ಆರ್ಥಿಕ ಸಂಕಷ್ಟದಲ್ಲಿರುವ ವಕೀಲರಿಗೆ ನೆರವು ನೀಡುವಂತೆ ಸಿಎಂಗೆ ಮನವಿ

ಲಾಕ್​ಡೌನ್​​ನಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದ ವಕೀಲರಿಗೆ ನೆರವು ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ವೇದಿಕೆಯಿಂದ ಬಂಟ್ವಾಳ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

Lawyers
Lawyers

ಬಂಟ್ವಾಳ:ಕೋವಿಡ್ ಹಿನ್ನೆಲೆಯಲ್ಲಿ ಲಾಕ್​​ಡೌನ್​ನಿಂದಾಗಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾದ ವಕೀಲ ಸಮುದಾಯಕ್ಕೆ ಆರ್ಥಿಕ ಸಹಾಯ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಕಾನೂನು ವೇದಿಕೆಯಿಂದ ಬಂಟ್ವಾಳ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕಾನೂನು ವೇದಿಕೆ (ರಿ) ಮಂಗಳೂರು ಜಿಲ್ಲಾಧ್ಯಕ್ಷ ಎಸ್.ಪಿ.ಚಂಗಪ್ಪ ನೇತೃತ್ವದಲ್ಲಿ ಬಂಟ್ವಾಳದ ವಕೀಲರ ಸಂಘದ ಸದಸ್ಯರು ಸೋಮವಾರ ಬಂಟ್ವಾಳ ಮಿನಿ ವಿಧಾನಸೌಧಕ್ಕೆ ತೆರಳಿ ಮನವಿ ಸಲ್ಲಿಸಿದರು.

ಬ್ಯಾಂಕುಗಳ ಮೂಲಕ ಕನಿಷ್ಠ ಬಡ್ಡಿಯಲ್ಲಿ ಸಾಲ ಬಿಡುಗಡೆ, ಯುವ ವಕೀಲರಿಗೆ ಕೊಡುವ ಪ್ರೋತ್ಸಾಹಧನ ಏರಿಕೆ, ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳಿಗೆ ಕಡ್ಡಾಯ ಕೋವಿಡ್ ಟೆಸ್ಟ್, ಅವರ ಕುಟುಂಬಸ್ಥರ ಭೇಟಿಗೆ ಅವಕಾಶ ಕೊಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ABOUT THE AUTHOR

...view details