ಕರ್ನಾಟಕ

karnataka

ETV Bharat / state

ಮಂಗಳೂರು: ಗುಂಡು ಹಾರಿಸಿಕೊಂಡು ಪಿಎಸ್ಐ ಆತ್ಮಹತ್ಯೆ ಯತ್ನ

ಎನ್​ಎಂಪಿಎಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಐಎಸ್ಎಫ್ ನ ಪಿಎಸ್​ಐ ಜ್ಯೋತಿ ಬಾಯಿ ಎಂಬುವರು ಇಂದು ಬೆಳಗ್ಗೆ 6 ಗಂಟೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

By

Published : Oct 12, 2022, 1:06 PM IST

psi tried to commit suicide in mangalore
ಆತ್ಮಹತ್ಯೆಗೆ ಯತ್ನಿಸಿದ ಪಿಎಸ್ಐ

ಮಂಗಳೂರು: ಸಿಐಎಸ್ಎಫ್ ನ ಪಿಎಸ್ಐವೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳೂರಿನ ಎನ್​ಎಂಪಿಎ ದ ಪ್ರಮುಖ ದ್ವಾರದ ಗೇಟ್​ ಬಳಿ ನಡೆದಿದೆ.

ಎನ್​ಎಂಪಿಎಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಐಎಸ್ಎಫ್ ನ ಪಿಎಸ್​ಐ ಜ್ಯೋತಿ ಬಾಯಿ ಎಂಬುವರು ಇಂದು ಬೆಳಗ್ಗೆ 6 ಗಂಟೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರ ಪತಿ ಓಂಬೀರ್ ಸಿಂಗ್ ಎಂಆರ್​ಪಿಎಲ್ ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿದ್ದಾರೆ. ಇವರು ರಾಜಸ್ಥಾನದ ಭಾರತ್ ಪುರ್ ಜಿಲ್ಲೆಯವರು.

ಇದನ್ನೂ ಓದಿ:ಮಂಡ್ಯ: ಟ್ಯೂಶನ್‍ಗೆ ಹೋಗಿದ್ದ ವಿದ್ಯಾರ್ಥಿನಿ ಸಂಪ್‍ನಲ್ಲಿ ಶವವಾಗಿ ಪತ್ತೆ

ಪ್ರಾಥಮಿಕ ಮಾಹಿತಿ ಪ್ರಕಾರ, ಕುಟುಂಬದೊಳಗಿನ ವಿವಾದದಿಂದಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾರತಿ ಬಾಯಿ ಅವರು ಬರೆದಿರುವ ಸೂಸೈಡ್ ನೋಟ್ ಪೊಲೀಸರಿಗೆ ಸಿಕ್ಕಿದೆ. ಗಾಯಗೊಂಡಿರುವ ಜ್ಯೋತಿ ಅವರನ್ನು ಎಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ABOUT THE AUTHOR

...view details