ಕರ್ನಾಟಕ

karnataka

ETV Bharat / state

ಮಂಗಳೂರಿನಲ್ಲಿ ಕಾಸರಗೋಡಿನ ಮೂವರು ಕೊರೊನಾ ಸೋಂಕಿತರು ಗುಣಮುಖ! - ದ.ಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಮೂವರು ಗುಣಮುಖ

ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳದ ಯುವಕ ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ. ಇಂದು ಕಾಸರಗೋಡಿನ ಮೂವರು ಗುಣಮುಖರಾಗಿದ್ದಾರೆ.

Recovered by the corona virus diseases of 3 Kasaragod people in  Mangalore hospital
ಮಂಗಳೂರಿನಲ್ಲಿ ಕಾಸರಗೋಡಿನ ಮೂವರು ಗುಣಮುಖ

By

Published : Apr 6, 2020, 7:34 PM IST

ಮಂಗಳೂರು:ದ.ಕ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತ ಮೂವರು ಗುಣಮುಖರಾಗಿದ್ದು, ಸತತ ಎರಡನೇ ದಿನವು ಶುಭ ಸುದ್ದಿ ಸಿಕ್ಕಿದೆ.

ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭಟ್ಕಳದ ಯುವಕ ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಇಂದು ಕಾಸರಗೋಡಿನ ಮೂವರು ಗುಣಮುಖರಾಗಿದ್ದಾರೆ. ಮಾರ್ಚ್ 24ರಂದು ಕೇರಳದ ನಾಲ್ಕು ಮಂದಿಗೆ ಮಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಇದರಲ್ಲಿ ಮೂವರು ಗುಣಮುಖರಾಗಿದ್ದಾರೆ.

ಎರಡು ಬಾರಿ ಕಳುಹಿಸಲಾದ ಗಂಟಲು ದ್ರವ ಪರೀಕ್ಷೆಯಲ್ಲಿ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಮೂವರೂ ಗುಣಮುಖರಾಗಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಒಟ್ಟು 12 ಪ್ರಕರಣಗಳು ಪತ್ತೆಯಾಗಿದ್ದು, ಇದರಲ್ಲಿ ನಾಲ್ವರು ಗುಣಮುಖರಾಗಿದ್ದಾರೆ. ಇನ್ನೂ 8 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details