ಕರ್ನಾಟಕ

karnataka

ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಲೋಕಾಯುಕ್ತ ಡಿವೈಎಸ್​ಪಿ ತಂಡ ಪರಿಶೀಲನೆ

By

Published : Mar 19, 2020, 3:06 PM IST

ಕೊರೊನಾ ವೈರಸ್​​ ಮುನ್ನೆಚ್ಚರಿಕೆ ಬಗ್ಗೆ ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ದಕ್ಷಿಣಕನ್ನಡ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಡಿವೈಎಸ್ಪಿ ವಿಜಯಪ್ರಸಾದ್ ನೇತೃತ್ವದ ತಂಡವು ಭೇಟಿ ನೀಡಿ ಪರಿಶೀಲಿಸಿತು.

Review by Lokayukta DYSP Team on Corona Precautions
ಲೋಕಾಯುಕ್ತ ಡಿವೈಎಸ್​ಪಿ ತಂಡದಿಂದ ಪರಿಶೀಲನೆ

ಸುಳ್ಯ (ದಕ್ಷಿಣಕನ್ನಡ):ಕೊರೊನಾ ವೈರಸ್​​ ಮುನ್ನೆಚ್ಚರಿಕೆ ಬಗ್ಗೆ ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ವಿಜಯಪ್ರಸಾದ್ ನೇತೃತ್ವದ ತಂಡವು ಜಿಲ್ಲೆಯ ಸುಳ್ಯ, ಕಡಬ, ನೆಲ್ಯಾಡಿ, ಉಪ್ಪಿನಂಗಡಿ ಸೇರಿದಂತೆ ವಿವಿಧ ಆರೋಗ್ಯ ಕೇಂದ್ರಗಳು, ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಲೋಕಾಯುಕ್ತ ಡಿವೈಎಸ್​ಪಿ ತಂಡದಿಂದ ಪರಿಶೀಲನೆ

ಈ ಬಗ್ಗೆ 'ಈಟಿವಿ ಭಾರತ'ದೊಂದಿಗೆ ಮಾತನಾಡಿದ ಲೋಕಾಯುಕ್ತ ಡಿವೈಎಸ್ಪಿ ವಿಜಯಪ್ರಸಾದ್, ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಆಸ್ಪತ್ರೆ, ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯಲಾಗಿದೆ. ಮಾತ್ರವಲ್ಲದೆ, ವೈದ್ಯಾಧಿಕಾರಿಗಳು, ಸಿಬ್ಬಂದಿಗೆ ಸಲಹೆ ಸೂಚನೆ ನೀಡಲಾಗಿದೆ ಎಂದರು.

'ಜನರು ಭಯಪಡುವ ಅಗತ್ಯ ಇಲ್ಲ'

ಜನರು ಯಾವುದೇ ರೀತಿಯ ಭಯ, ಆತಂಕ ಪಡುವ ಅಗತ್ಯವೇ ಇಲ್ಲ. ಸರ್ಕಾರವು ವಿವಿಧ ಇಲಾಖೆಗಳ ವತಿಯಿಂದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ. ಜನರಿಗೆ ಇಲಾಖೆ ಕಡೆಗಳಿಂದ ಯಾವುದಾದರೂ ಸಮಸ್ಯೆಗಳು ಕಂಡುಬಂದಲ್ಲಿ ತಮ್ಮನ್ನು ನೇರವಾಗಿ ಸಂಪರ್ಕಿಸಬಹುದು. ಮಾಧ್ಯಮದ ಮೂಲಕ ಅಧಿಕಾರಿಗಳು, ಜನರಿಗೆ ಪೂರ್ಣ ಸಹಕಾರ ನೀಡಬೇಕೆಂದು ವಿಜಯಪ್ರಸಾದ್ ತಿಳಿಸಿದರು.

ABOUT THE AUTHOR

...view details