ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅ.ವಂ.ಡಾ. ಪೀಟರ್ ಪೌಲ್ ಸಲ್ದಾನಾ ಅವರು 53 ಬಡ ವಿದ್ಯಾರ್ಥಿಗಳಿಗೆ 2.57 ಲಕ್ಷ ರೂ. ಸಹಾಯ ಧನ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಡವರು ಎಲ್ಲರಿಗೂ ನಿಜವಾದ ಶಿಕ್ಷಕರಾಗಿದ್ದು, ಸರಳವಾಗಿ ಬದುಕುವುದನ್ನು ಕಲಿಸಿ ಕೊಡುತ್ತಾರೆ. ಯೇಸು ಸ್ವಾಮಿ ನಮಗೆ ಈ ಲೋಕದ ಬೆಳಕು ಮತ್ತು ಭೂಮಿಗೆ ಚಿರಋಣಿಯಾಗಿರಲು ಕರೆಕೊಟ್ಟಿದ್ದಾರೆ. ಅವರ ಹಿಂಬಾಲಕರದ ನಾವು ಇತರರಿಗೆ ಉಪಕಾರ ಮಾಡುವುದರಿಂದ ನಮ್ಮ ಜೀವನ ಸಾರ್ಥಕವಾಗುತ್ತದೆ. ಎಲ್ಲರೂ ಹಂಚಿಕೊಂಡು ಜೀವಿಸಿದಾಗ ನಾವು ಒಳ್ಳೆಯ ಮನುಷ್ಯರಾಗಲು ಸಾಧ್ಯ ಎಂದು ಹೇಳಿದರು.