ಬಂಟ್ವಾಳ: ಆರ್ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್, ಕಾಂಗ್ರೆಸ್ ನಾಯಕರಾದ ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ, ಮಾಜಿ ಶಾಸಕ ವಸಂತ ಬಂಗೇರ, ಸುಳ್ಯದಿಂದ ವಿಧಾನಸಭೆಗೆ ಸ್ಪರ್ಧಿಸಿದ್ದ ಮುಖಂಡ ಡಾ. ರಘು ಮನೆಗಳಿಗೆ ಭೇಟಿ ನೀಡಿ ಅಯೋಧ್ಯೆ ಶ್ರೀರಾಮ ಮಂದಿರಕ್ಕಾಗಿ ನಿಧಿ ಸಂಗ್ರಹಿಸಿದ್ದಾರೆ.
ಕಾಂಗ್ರೆಸ್ ಮುಖಂಡರಿಂದ ರಾಮ ಮಂದಿರಕ್ಕಾಗಿ ನಿಧಿ ಸಂಗ್ರಹಿಸಿದ ಕಲ್ಲಡ್ಕ ಪ್ರಭಾಕರ ಭಟ್ - Kalladka Prabhakar Bhat
ಕಾಂಗ್ರೆಸ್ ನಾಯಕರ ಮನೆಗೆ ಭೇಟಿ ನೀಡಿ ಆರ್ಎಸ್ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್, ಅಯೋಧ್ಯೆ ಶ್ರೀರಾಮ ಮಂದಿರಕ್ಕಾಗಿ ನಿಧಿ ಸಂಗ್ರಹ ಮಾಡಿದ್ದಾರೆ.
![ಕಾಂಗ್ರೆಸ್ ಮುಖಂಡರಿಂದ ರಾಮ ಮಂದಿರಕ್ಕಾಗಿ ನಿಧಿ ಸಂಗ್ರಹಿಸಿದ ಕಲ್ಲಡ್ಕ ಪ್ರಭಾಕರ ಭಟ್ RSS leader Dr. Kalladka Prabhakar Bhat](https://etvbharatimages.akamaized.net/etvbharat/prod-images/768-512-10511884-thumbnail-3x2-vish.jpg)
ಆರ್ಎಸ್ಎಸ್ ಮುಖಂಡ ಪ್ರಭಾಕರ ಭಟ್
ಈ ಬಗ್ಗೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಮಂದಿರ ನಿರ್ಮಾಣಕ್ಕಾಗಿ ನಿಧಿ ಸಂಗ್ರಹಕ್ಕೆಂದು ನಾವು ಮನೆ ಮನೆಗೆ ತೆರಳುವ ಭಾಗವಾಗಿ ಕಾಂಗ್ರೆಸ್ ಮುಖಂಡರ ಮನೆಗಳಿಗೂ ತೆರಳಿದ್ದೇವೆ.
ಪಕ್ಷ ಭೇದ ಮರೆತು ರಾಮ ಮಂದಿರಕ್ಕಾಗಿ ಮುಕ್ತ ಮನಸ್ಸಿನಿಂದ ದೇಣಿಗೆ ನೀಡಿದ್ದಾರೆ. ರಾಮ ಮಂದಿರ ಭಾರತದ ಅಸ್ಮಿತೆಯ ಸಂಕೇತ. ಮಂದಿರ ನಿರ್ಮಾಣ ಸಮಸ್ತ ಹಿಂದು ಬಾಂಧವರ ಸಂಕಲ್ಪವೂ ಹೌದು ಎಂದರು.