ಕರ್ನಾಟಕ

karnataka

ETV Bharat / state

ದ.ಕ. ಜಿಲ್ಲೆಯಲ್ಲಿ 252 ಮಂದಿಯ ಗಂಟಲು ದ್ರವದ ಮಾದರಿ ಪರೀಕ್ಷೆಗೆ ರವಾನೆ - throat fluid is sent for testing today

ಮಂಗಳೂರಿನಲ್ಲಿ ಇಂದು 252 ಮಂದಿಯ ಗಂಟಲು ದ್ರವದ ಸ್ಯಾಂಪಲ್ ಪರೀಕ್ಷೆಗೆ ರವಾನೆ ಮಾಡಲಾಗಿದೆ. 33 ಮಂದಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರು ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಿಲ್ಲಾಧಿಕಾರಿಯವರ ಪ್ರಕಟಣೆ
ಜಿಲ್ಲಾಧಿಕಾರಿಯವರ ಪ್ರಕಟಣೆ

By

Published : May 23, 2020, 11:11 PM IST

ಮಂಗಳೂರು: ಕೋವಿಡ್ -19 ಶಂಕೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 252 ಮಂದಿಯ ಗಂಟಲು ದ್ರವದ ಸ್ಯಾಂಪಲ್ ಪರೀಕ್ಷೆಗೆ ರವಾನೆ ಮಾಡಲಾಗಿದೆ.

ಜಿಲ್ಲಾಧಿಕಾರಿಯವರ ಪ್ರಕಟಣೆ

ಹಿಂದೆ ಪರೀಕ್ಷೆಗೆಂದು ಕಳುಹಿಸಿರುವ 258 ಮಂದಿಯ ಗಂಟಲು ದ್ರವದ ವರದಿ ಬಂದಿದೆ. ಅದರಲ್ಲಿ 246 ಮಂದಿಯಲ್ಲಿ ನೆಗೆಟಿವ್ ವರದಿ ಬಂದಿದ್ದು, ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. 584 ಮಂದಿಯ ವರದಿ ಬರಬೇಕಾಗಿದ್ದು, ಒಟ್ಟು 15 ಮಂದಿ ಮೇಲೆ ನಿಗಾವಹಿಸಲಾಗಿದೆ. 18 ಮಂದಿಯನ್ನು ಮಂಗಳೂರಿನ ಇಎಸ್ಐ ಹಾಸ್ಪಿಟಲ್ ನಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದ್ದು, 40 ಮಂದಿಯನ್ನು ಸುರತ್ಕಲ್ ನ ಎನ್ಐಟಿಕೆಯಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ವೆನ್ಲಾಕ್ ಆಸ್ಪತ್ರೆಯ ಕ್ವಾರೆಂಟೈನ್ ನಲ್ಲಿ ಯಾರೂ ಇಲ್ಲ.

6,073 ಮಂದಿ 28 ದಿನಗಳ ಹೋಮ್ ಕ್ವಾರಂಟೈನ್ ಮುಗಿಸಿದ್ದಾರೆ. ಇಂದು 162 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಮಂಗಳೂರಲ್ಲಿ ಈ ವರೆಗೆ 42,011 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ. ಈ ವರೆಗೆ 6,503 ಮಂದಿಯ ಗಂಟಲು ದ್ರವ ಪಡೆಯಲಾಗಿದ್ದು, ಈ ವರೆಗೆ 5,919 ಮಂದಿಯ ವರದಿ ಬಂದಿದೆ. ಅದರಲ್ಲಿ 5,854 ಮಂದಿಯ ನೆಗೆಟಿವ್ ವರದಿ ಬಂದಿದೆ. 65 ಮಂದಿಯಲ್ಲಿ ಸೋಂಕು ದೃಢಗೊಂಡಿದ್ದು, 26 ಮಂದಿ ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

33 ಮಂದಿ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರು ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ABOUT THE AUTHOR

...view details