ಕರ್ನಾಟಕ

karnataka

By

Published : Dec 25, 2021, 3:36 PM IST

Updated : Dec 25, 2021, 3:43 PM IST

ETV Bharat / state

ಮಂಗಳೂರು: ಅಪ್ರಾಪ್ತೆ ಸೇರಿ ಇಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ

ಆರೋಪಿ ಮುಸ್ತಫಾ ತಲಪಾಡಿಯ ದೇವಿಪುರಕ್ಕೆ ತೆರಳುವ ಒಳರಸ್ತೆಯಲ್ಲಿ ತಚ್ಚನಿ ಎಂಬಲ್ಲಿ ಒಂಟಿಯಾಗಿ ಬರುತ್ತಿದ್ದ ಬಾಲಕಿಯನ್ನ ಮುಟ್ಟಿ ಕಿರುಕುಳ ನೀಡಿ ಪರಾರಿಯಾಗಿದ್ದ. ಈ ಬಗ್ಗೆ ಉಳ್ಳಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ
ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ

ಮಂಗಳೂರು :ಕಳೆದ ವಾರ ಅಪ್ರಾಪ್ತೆ ಸೇರಿದಂತೆ ಇಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಸಾರ್ವಜನಿಕರೇ ಕಾದು ಕುಳಿತು ಪತ್ತೆ ಹಚ್ಚಿ ಪೊಲೀಸರಿಗೊಪ್ಪಿಸಿದ ಘಟನೆ ಇಂದು ನಡೆದಿದೆ.

ಮಂಜೇಶ್ವರ ಹೊಸಬೆಟ್ಟು ನಿವಾಸಿ ಮುಸ್ತಫಾ ಎಂಬಾತ ಬಂಧಿತ ಆರೋಪಿ. ಆರೋಪಿ ಮುಸ್ತಫಾ ತಲಪಾಡಿಯ ದೇವಿಪುರಕ್ಕೆ ತೆರಳುವ ಒಳರಸ್ತೆಯಲ್ಲಿ ತಚ್ಚನಿ ಎಂಬಲ್ಲಿ ಒಂಟಿಯಾಗಿ ಬರುತ್ತಿದ್ದ ಬಾಲಕಿಯನ್ನ ಮುಟ್ಟಿ ಕಿರುಕುಳ ನೀಡಿ ಪರಾರಿಯಾಗಿದ್ದ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಬಗ್ಗೆ ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿ ಆರೋಪಿಯ ಗುರುತು ಪತ್ತೆ ಹಚ್ಚಿದ್ದರೂ, ಆರೋಪಿ ಸಿಕ್ಕಿರಲಿಲ್ಲ. ಮರುದಿನ‌ 22 ವರ್ಷದ ಯುವತಿಯೊಬ್ಬಳು ಪೊಲೀಸ್ ಠಾಣೆಗೆ ಬಂದು ಇದೇ ಆರೋಪಿ ತನಗೂ ಲೈಂಗಿಕ ಕಿರುಕುಳ ನೀಡಿದ್ದ ಎಂದು ದೂರು ನೀಡಿದ್ದಳು.

ಇಂದು ಆರೋಪಿ ಸ್ಕೂಟರ್‌ನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ಸಾರ್ವಜನಿಕರೇ ದೇವಿಪುರದಲ್ಲಿ ತಡೆದು ನಿಲ್ಲಿಸಿ ಪೊಲೀಸರಿಗೊಪ್ಪಿಸಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Last Updated : Dec 25, 2021, 3:43 PM IST

For All Latest Updates

TAGGED:

ABOUT THE AUTHOR

...view details