ಕರ್ನಾಟಕ

karnataka

By

Published : Dec 2, 2020, 9:16 AM IST

ETV Bharat / state

ಮೂಲಸೌಕರ್ಯ ಮರೀಚಿಕೆ: ಚುನಾವಣಾ ಬಹಿಷ್ಕಾರದ ಬ್ಯಾನರ್​ ಅಳವಡಿಸಿದ ತಡಗಜೆ ಗ್ರಾಮಸ್ಥರು

ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ಬೀದಿ ದೀಪದ ವ್ಯವಸ್ಥೆ ಇಲ್ಲವೆಂದು ಆರೋಪಿಸಿ ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕರಿಸುವುದಾಗಿ ತಡಗಜೆ ಗ್ರಾಮಸ್ಥರು ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಸಿದ್ದಾರೆ.

Tadagaja villagers put the banner of election boycott
''ಅಭಿವೃದ್ಧಿ ಕಂಡಿಲ್ಲ'' - ಚುನಾವಣಾ ಬಹಿಷ್ಕಾರದ ಬ್ಯಾನರ್​ ಅಳವಡಿಸಿದ ತಡಗಜೆ ಗ್ರಾಮಸ್ಥರು

ಸುಳ್ಯ(ದಕ್ಷಿಣ ಕನ್ನಡ):ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ದಿನ ನಿಗದಿಯಾಗಿದ್ದು, ಸಿದ್ಧತೆ ನಡೆಯುತ್ತಿದ್ದರೆ ಅಲ್ಲಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್​ಗಳು ಕಾಣಸಿಗುತ್ತಿವೆ. ಹೌದು, ಸುಳ್ಯ ತಾಲೂಕಿನ ಬೆಳ್ಳಾರೆಯ ತಡಗಜೆಯಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಒಂದನ್ನು ಸ್ಥಳೀಯರು ಅಳವಡಿಸಿದ್ದಾರೆ.

ಚುನಾವಣಾ ಬಹಿಷ್ಕಾರದ ಬ್ಯಾನರ್​ ಅಳವಡಿಸಿದ ತಡಗಜೆ ಗ್ರಾಮಸ್ಥರು

ಈ ಸುದ್ದಿಯನ್ನೂ ಓದಿ:ಕಾರವಾರ: ಕೊಟ್ಟಿಗೆಯನ್ನೇರಿದ್ದ ಕಾಳಿಂಗ ಸೆರೆ!

ಕಳೆದ 25 ವರ್ಷಗಳಿಂದ ಬೆಳ್ಳಾರೆ ಗ್ರಾಮದ 3ನೇ ವಾರ್ಡ್​​ನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಮೂಲಭೂತ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ಬೀದಿ ದೀಪದ ವ್ಯವಸ್ಥೆ ಸರಿಯಾಗಿ ಇಲ್ಲ ಎನ್ನುವ ಆರೋಪ ಕೇಳಿಬಂದಿವೆ.

ಜನಪ್ರತಿನಿಧಿಗಳು ಈವರೆಗೂ ಕೇವಲ ಭರವಸೆ ಮಾತ್ರ ಕೊಡುತ್ತಿದ್ದಾರೆ ಹೊರತು, ಜನರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸಿಲ್ಲ ಎಂದು ಆರೋಪಿಸಿ, ಗ್ರಾಮ ಪಂಚಾಯತ್ ಚುನಾವಣೆ ಬಹಿಷ್ಕರಿಸುವುದಾಗಿ ತಡಗಜೆ ಗ್ರಾಮಸ್ಥರು ಬ್ಯಾನರ್ ಅಳವಡಿಸಿದ್ದಾರೆ.

ABOUT THE AUTHOR

...view details