ಕರ್ನಾಟಕ

karnataka

By

Published : Apr 3, 2020, 11:06 PM IST

ETV Bharat / state

ದಕ್ಷಿಣಕನ್ನಡ:  ಇಂದು‌ 43 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ..

ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿಂದು 43 ಮಂದಿಯ ಗಂಟಲು ದ್ರವವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಹಿಂದೆ ಕಳುಹಿಸಲಾದ 16 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿಯಲ್ಲಿ ಎಲ್ಲವು ನೆಗೆಟಿವ್ ಬಂದಿದೆ. ಈವರೆಗೆ 239 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಇದರಲ್ಲಿ 9 ಪಾಸಿಟಿವ್ ಮತ್ತು 230 ನೆಗೆಟಿವ್ ಬಂದಿತ್ತು.

The corona panic; 43 people Throat taken for test today
ಕೊರೊನಾ ಭೀತಿ; ಇಂದು‌ 43 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

ಮಂಗಳೂರು; ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿಂದು 43 ಮಂದಿಯ ಗಂಟಲು ದ್ರವ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿದೆ.

ಈ ಹಿಂದೆ ಕಳುಹಿಸಲಾದ 16 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿಯಲ್ಲಿ ಎಲ್ಲವೂ ನೆಗೆಟಿವ್ ಬಂದಿದೆ. ಈವರೆಗೆ 239 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 9 ಪಾಸಿಟಿವ್ ಮತ್ತು 230 ನೆಗೆಟಿವ್ ಬಂದಿತ್ತು.

ಕೊರೊನಾ ಭೀತಿ; ಇಂದು‌ 43 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

ಇಂದು 72 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 38,518 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಹೋಮ್ ಕ್ವಾರಂಟೈನ್​ನಲ್ಲಿ 4,727 ಮಂದಿ ಇದ್ದು 21 ಮಂದಿ ಇಎಸ್ಐ ಆಸ್ಪತ್ರೆ ಯಲ್ಲಿ ಕ್ವಾರಂಟೈನ್​​​ನಲ್ಲಿ ಇದ್ದಾರೆ. ಇಂದಿಗೆ 630 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ABOUT THE AUTHOR

...view details