ಪುತ್ತೂರು(ದಕ್ಷಿಣ ಕನ್ನಡ): ಕೆಮ್ಮಾಯಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ, ಬೀಡಿ ಬ್ರ್ಯಾಂಚ್ ಸೇರಿದಂತೆ ಸ್ಥಳೀಯ 4 ಅಂಗಡಿಗಳಲ್ಲಿ ಕಳ್ಳರು ಕೈಚಳಕ ತೋರಿಸಿರುವ ಘಟನೆ ಇಂದು ಬೆಳಕಿಗೆ ಬಂದಿದೆ.
ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಹಿಂಬದಿಯ ಗೋಪುರದಿಂದ ದೇವಳದ ಒಳಾಂಗಣಕ್ಕೆ ಇಳಿದ ಕಳ್ಳರು ದೇವರ ಗರ್ಭಗುಡಿಯ ಬಾಗಿಲು ಮುರಿದು ಒಳ ನುಗ್ಗಿದ್ದಾರೆ. ಬಳಿಕ ದೇವರ ಬೆಳ್ಳಿಯ ಮಾಲೆಯನ್ನು ಕಳವು ಮಾಡಿದ್ದಾರೆ. ಉಳಿದಂತೆ ದೇವಳದ ಕಾಣಿಕೆ ಹುಂಡಿಯಿಂದ ಹಣ ಕದ್ದಿದ್ದಾರೆ. ಜ. 11 ರಂದು ಕಾಣಿಕೆ ಹುಂಡಿ ಲೆಕ್ಕಾಚಾರ ಆಗಿರುವ ಹಿನ್ನೆಲೆ, ಹುಂಡಿಯಿಂದ ಹಣ ಕಳ್ಳತನವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.