ಕರ್ನಾಟಕ

karnataka

ಜಲ್ಲಿ ಸಾಗಾಟದ ಟಿಪ್ಪರ್ ಪಲ್ಟಿ: ಚಾಲಕ ಸ್ಥಳದಲ್ಲೇ ಮೃತ್ಯು

By

Published : Nov 4, 2020, 7:47 PM IST

ಪುಣಚ ಬುಳೇರಿಕಟ್ಟೆ ರಸ್ತೆಯಲ್ಲಿ ಟಿಪ್ಪರ್ ಲಾರಿ ರಸ್ತೆಯಲ್ಲಿ ಪಲ್ಟಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬ ಸಣ್ಣಪುಟ್ಟ ಗಾಯಗೊಂಡಿದ್ದಾನೆ.

Tippar lorry accident in Bantwal
ಜಲ್ಲಿ ಸಾಗಾಟದ ಟಿಪ್ಪರ್ ಪಲ್ಟಿ

ಬಂಟ್ವಾಳ:ಕೋರೆಯಿಂದ ಜಲ್ಲಿ ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿ ರಸ್ತೆಯಲ್ಲಿ ಪಲ್ಟಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊಬ್ಬ ಸಣ್ಣಪುಟ್ಟ ಗಾಯಗೊಂಡ ಘಟನೆ ಪುಣಚ ಬುಳೇರಿಕಟ್ಟೆ ರಸ್ತೆಯಲ್ಲಿ ಸಂಭವಿಸಿದೆ.

ಕಾಸರಗೋಡು ಬಳ್ಳೂರು ನಿವಾಸಿ ಮೊಹಮ್ಮದ್ ರಫೀಕ್ ಮೃತಪಟ್ಟ ಚಾಲಕ. ಪುಣಚ ಸಮೀಪ ಇರುವ ಕೋರೆಯಿಂದ ಜಲ್ಲಿ ಸಾಗಾಟ ಮಾಡುತ್ತಿದ್ದ ವೇಳೆ ಪುಣಚ ಗ್ರಾಮದ ಪಾಲತ್ತಡ್ಕ ಎಂಬಲ್ಲಿ ನಿಯಂತ್ರಣ ಕಳೆದು ರಸ್ತೆಗೆ ಉರುಳಿ ಬಿದ್ದಿದೆ.

ಚಾಲಕ ಟಿಪ್ಪರ್ ಕೆಳಗಡೆ ಸಿಕ್ಕಿಕೊಂಡು ಮೃತಪಟ್ಟಿದ್ದಾರೆ. ಬಳಿಕ ಸ್ಥಳೀಯರು ಮೃತದೇಹವನ್ನು ಹೊರಕ್ಕೆ ತೆಗೆದರು. ಗಾಯಗೊಂಡ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ವಿಟ್ಲ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details