ಮಂಗಳೂರು:ನಗರದಿಂದ ತಲಪಾಡಿಗೆ ಸಂಚರಿಸುವ ಖಾಸಗಿ ಬಸ್ ಕಂಡಕ್ಟರೊಬ್ಬರು ರೈಲು ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾರೆ.
ರೈಲು ಡಿಕ್ಕಿ ಹೊಡೆದು ಖಾಸಗಿ ಬಸ್ ಕಂಡಕ್ಟರ್ ಸಾವು - ರೈಲ್ವೇ ಪೊಲೀಸ್ ಠಾಣೆ, ಮಂಗಳೂರು
ಸಿಟಿ ಬಸ್ನಲ್ಲಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ರೈಲು ಹಳಿಯ ಮೇಲೆ ಬಿದ್ದ ಕಂಡಕ್ಟರ್ ಶವ
ಕಾಪಿಕಾಡು ನಿವಾಸಿ ರತನ್ ಕುಮಾರ್ (40) ಮೃತಪಟ್ಟವರು.
ಇವರು ಇಂದು ಮನೆಯಿಂದ ಕರ್ತವ್ಯ ನಿರ್ವಹಿಸಲು ತೆರಳುವ ವೇಳೆ ಈ ದುರ್ಘಟನೆ ನಡೆದಿದೆ. ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.