ಚಾಮರಾಜನಗರ: ಜಾತ್ರೆಗಳಲ್ಲಿ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕುದೇರು ಪೊಲೀಸರು ಬಂಧಿಸಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ವಸಂತ ಹಾಗೂ ಜ್ಯೋತಿ ಬಂಧಿತರು. ಹಾಸನ ಮೂಲದ ನಾಗರತ್ನ ತಲೆ ಮರೆಸಿಕೊಂಡಿದ್ದು, ಈಕೆಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಜಾತ್ರೆಗಳು ನಡೆಯುತ್ತಿರುವ ವೇಳೆ ಆರೋಪಿಗಳು ಮಹಿಳೆಯರ ಸರ ಕದ್ದು ಪರಾರಿಯಾಗುತ್ತಿದ್ದರು. ಚಾಮರಾಜನಗರ ಜಿಲ್ಲೆಯಲ್ಲಿ ಒಟ್ಟು 10 ಪ್ರಕರಣ ಹಾಗೂ ತುಮಕೂರು, ಶಿವಮೊಗ್ಗ, ಬೆಂಗಳೂರು ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ ಇವರ ವಿರುದ್ಧ 9 ಪ್ರಕರಣಗಳು ದಾಖಲಾಗಿವೆ.