ಬಂಟ್ವಾಳ:ಬಂಟ್ವಾಳ ಭಂಡಾರಿಬೆಟ್ಟು ವಸತಿ ಸಂಕೀರ್ಣದಲ್ಲಿ ಕೊಲೆಯಾದ ತುಳು ನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಟ್ವಾಳ ಡಿವೈಎಸ್ಪಿ ವೆಲಂಟೈನ್ ಡಿಸೋಜ ನೇತೃತ್ವದ ತಂಡ ಶನಿವಾರ ರಾತ್ರಿ ವಶಕ್ಕೆ ಪಡೆದಿದೆ.
ನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ
ಬಂಟ್ವಾಳ ಭಂಡಾರಿಬೆಟ್ಟು ವಸತಿ ಸಂಕೀರ್ಣದಲ್ಲಿ ಕೊಲೆಯಾದ ತುಳು ನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಿವಾಸಿ ಸತೀಶ್ ಕುಲಾಲ್ ಹಾಗೂ ಕಿನ್ನಿಗೋಳಿ ನಿವಾಸಿ ಗಿರೀಶ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಶಕ್ಕೆ
ಬಂಟ್ವಾಳ ನಿವಾಸಿ ಸತೀಶ್ ಕುಲಾಲ್ ಹಾಗೂ ಕಿನ್ನಿಗೋಳಿ ನಿವಾಸಿ ಗಿರೀಶ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರು ಶನಿವಾರ ರಾತ್ರಿ ಕೇರಳದ ಕಡೆಯಿಂದ ಬಂಟ್ವಾಳಕ್ಕೆ ಬರುತ್ತಿರುವ ಕುರಿತು ಮಾಹಿತಿ ಪಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ.
ಸುರೇಂದ್ರ ಬಂಟ್ವಾಳನ ಸ್ನೇಹಿತ ಎನ್ನಲಾದ ಸತೀಶ್ ಧ್ವನಿಯಲ್ಲಿರುವ ಆಡಿಯೋವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.