ಕರ್ನಾಟಕ

karnataka

ETV Bharat / state

ಬೈಕ್ ಗೆ ಟಿಪ್ಪರ್ ಡಿಕ್ಕಿ : ಇಬ್ಬರು ಸಾವು

ಬುಲೆಟ್ ಬೈಕ್ ಹಾಗೂ ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರರಿಬ್ಬರೂ ಸಾವನ್ನಪ್ಪಿದ್ದಾರೆ.

By

Published : May 8, 2019, 7:44 PM IST

ಇಬ್ಬರು ಸಾವು

ಮಂಗಳೂರು: ಬೈಕ್ ಹಾಗೂ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಣ್ಣಳಿಕೆ-ಕತ್ಪೆ ರಸ್ತೆಯ ಕುಮೇರ್ ಎಂಬಲ್ಲಿ ನಡೆದಿದೆ.

ಸಿದ್ಧಕಟ್ಟೆಯ ಹಿರ್ಣಿ ನಿವಾಸಿ ಸುರೇಂದ್ರ (33) ಹಾಗೂ ಮೃತರ ಸಂಬಂಧಿ ಜಯಲಕ್ಷ್ಮೀ (35)aಪಘಾತದಲ್ಲಿ ಮೃತಪಟ್ಟವರು ಎಂದು ತಿಳಿದು ಬಂದಿದೆ. ಇವರು ಬೈಕ್‌ನಲ್ಲಿ ಕೊಡಿಯಾಲ್‌ಬೈಲ್‌ಗೆ ತೆರಳುತ್ತಿದ್ದ ಸಂದರ್ಭ ಕರ್ಪೆ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಲಾರಿಯೊಂದು ಅಣ್ಣಳಿಕೆ-ಹಿರ್ಣಿ ಒಳರಸ್ತೆಯ ಕುಮೇರ್ ಎಂಬಲ್ಲಿ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಅಪಘಾತ ಸಂಬಂಧ ಪ್ರಕರಣ ಪೊಲೀಸರು ದಾಖಲಿಸಿ,ಲಾರಿ ಚಾಲಕ ನಾಗಪ್ಪ ರೋಣದ ಎಂಬಾತನನ್ನು ವಿಚಾರಣೆ ನಡೆಸಿದ್ದಾರೆ.

ABOUT THE AUTHOR

...view details