ಕರ್ನಾಟಕ

karnataka

By

Published : Mar 12, 2022, 10:28 PM IST

Updated : Mar 12, 2022, 10:42 PM IST

ETV Bharat / state

ಮಾಜಿ ಸಚಿವ ಖಾದರ್ ವಿರುದ್ಧ ತಿರುಗಿಬಿದ್ದ ಉಳ್ಳಾಲ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಮಾಜಿ ಸಚಿವ ಯು ಟಿ ಖಾದರ್​ ವಿರುದ್ಧ ತಿರುಗಿಬಿದ್ದಿರುವ ಉಳ್ಳಾಲದ ಮಾಜಿ ಬ್ಲಾಕ್​ ಕಾಂಗ್ರೆಸ್​ ಅಧ್ಯಕ್ಷ ಸಂತೋಷ್ ಶೆಟ್ಟಿ, 100 ಜನ ಕಾಂಗ್ರೆಸ್​ ಬೆಂಬಲಿಗರೊಂದಿಗೆ ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ.

ullala congress leader and is Supporters 100 join bjp
ಉಳ್ಳಾಲದ ಬ್ಲಾಕ್​ ಕಾಂಗ್ರೇಸ್​ ಅಧ್ಯಕ್ಷ ಸಂತೋಷ್ ಶೆಟ್ಟಿ

ಮಂಗಳೂರು: ಮಾಜಿ ಸಚಿವ ಖಾದರ್ ವಿರುದ್ಧ ತಿರುಗಿ ಬಿದ್ದಿರುವ ಉಳ್ಳಾಲ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿಯವರು 100 ಮಂದಿ ಕೈ ಕಾರ್ಯಕರ್ತರೊಂದಿಗೆ ಬಿಜೆಪಿ ಸೇರ್ಪಡೆಯಾಗುವ ನಿರ್ಧಾರ ಪ್ರಕಟಿಸಿದ್ದಾರೆ‌.

ಮಾಜಿ ಸಚಿವ ಖಾದರ್ ವಿರುದ್ಧ ತಿರುಗಿಬಿದ್ದ ಉಳ್ಳಾಲ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಶನಿವಾರ ನಗರದ ಪ್ರೆಸ್ ಕ್ಲಬ್​ನಲ್ಲಿ ಮಾತನಾಡಿದ ಅವರು, ಯು.ಟಿ. ಖಾದರ್ ಅತ್ಯಂತ ಭ್ರಷ್ಟ ರಾಜಕಾರಣಿ. ಅವರ ನಡವಳಿಕೆಯಿಂದ ನಾವೆಲ್ಲರೂ ಬೇಸತ್ತಿದ್ದೇವೆ. ಈ ಕಾರಣದಿಂದಾಗಿಯೇ ನಾವು ಕಾಂಗ್ರೆಸ್ ತೊರೆಯುವ ನಿರ್ಧಾರ ಕೈಗೊಂಡಿದ್ದು, 100 ಮಂದಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇವೆ ಎಂದು ಹೇಳಿದರು.

ಉಳ್ಳಾಲ ಕ್ಷೇತ್ರದಲ್ಲಿ ಇಷ್ಟು ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಅಲ್ಪಸ್ವಲ್ಪ ಅನುದಾನದ ಮೂಲಕ ಕಾಮಗಾರಿ ನಡೆಸಿ ಬರೀ ಪೋಸ್ ಕೊಡಲಾಗುತ್ತಿದೆ. ಬರೀ ಮದುವೆ ಮುಂಜಿ, ಮಕ್ಕಳ ತೊಟ್ಟಿಲು ಹಾಕುವ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆಯೇ ಹೊರತು ಅಭಿವೃದ್ಧಿ ಕಾರ್ಯ ಯಾವುದೂ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಪಂಚರಾಜ್ಯಗಳಲ್ಲಿ ಸೋತು ಸುಣ್ಣವಾದ ಕಾಂಗ್ರೆಸ್​​.. ನಾಳೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆ

Last Updated : Mar 12, 2022, 10:42 PM IST

For All Latest Updates

ABOUT THE AUTHOR

...view details