ಮಂಗಳೂರು: ಅಮೂಲ್ಯವಾದ ಜ್ಞಾನಕ್ಕೂ, ಮಾಹಿತಿಗೂ ತುಂಬಾ ವ್ಯತ್ಯಾಸವಿದೆ. ಇಂತಹ ವಿಶ್ವವಿದ್ಯಾಲಯಗಳು ಎಲ್ಲಾ ಶ್ರೇಷ್ಠವಾದ ಜ್ಞಾನವನ್ನು ಸಂಗ್ರಹಿಸಿಡುವ ಕೇಂದ್ರ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.
ನಗರದ ಹಂಪನಕಟ್ಟೆಯ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ 150ನೇ ವರ್ಷಾಚರಣೆ ಉದ್ದೇಶಿಸಿ ಮಾತನಾಡಿದ ಅವರು, ಇಲ್ಲಿನ ಅಧ್ಯಾಪಕರ ಬದ್ಧತೆ ದೇಶಕ್ಕೆ ಅನೇಕ ರತ್ನಗಳನ್ನು ನೀಡುವಲ್ಲಿ ಯಶಸ್ವಿಯಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.