ಉಪ್ಪಿನಂಗಡಿ :ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಕಾರಿನಲ್ಲಿ ಶಾಲೆಗೆ ಬಿಡುವ ಆಸೆ ತೋರಿಸಿ ಲಾಡ್ಜ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮುನಾಸೀರ್ (21) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ನಿವಾಸಿಯಾದ 13 ವರ್ಷದ ಬಾಲಕಿಯನ್ನು ಕಲ್ಲೇರಿಯ ಜನತಾ ಕಾಲೋನಿ ನಿವಾಸಿ ಮುನಾಸೀರ್ ಶಾಲೆಗೆ ಕರೆದೊಯ್ಯುವ ಭರವಸೆ ನೀಡಿ ಮೇ 30ರಂದು ಹಾಗೂ ಜೂನ್ 7ರಂದು ಬಲವಂತವಾಗಿ ಕಾರಿನಲ್ಲಿ ಕೂರಿಸಿದ್ದಾನೆ. ಬಳಿಕ ಉಪ್ಪಿನಂಗಡಿಯ ಲಾಡ್ಜ್ಗೆ ಕರೆದೊಯ್ದು ದೈಹಿಕ ಸಂಪರ್ಕ ನಡೆಸಿದ್ದ.