ಮಂಗಳೂರು:ಜಿಲ್ಲೆಯಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದು, ಜನ ಸಾಮಾನ್ಯರು ಭಯದಲ್ಲಿ ಬದುಕುತ್ತಿದ್ದಾರೆ. ಎನ್ಆರ್ ಸಿ, ಸಿಎಎ ನೋಂದಣಿಗೆ ಯಾವುದೇ ಅಧಿಕಾರಿಗಳನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿಲ್ಲ ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟ ಪಡಿಸಬೇಕಾಗಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಆಶಾಕಾರ್ಯಕರ್ತೆಯರು, ಆರೋಗ್ಯ ಇಲಾಖೆಯವರು, ಅಂಗನವಾಡಿ ಕಾರ್ಯಕರ್ತೆಯರು ಮಾಹಿತಿಗಳಿಗೆ ಮನೆ ಮನೆಗೆ ಬರುವಾಗ ಸ್ಪಷ್ಟವಾಗಿ ಯಾರೂ ಮಾಹಿತಿ ನೀಡುತ್ತಿಲ್ಲ. ಬಾಗಿಲು ಕೂಡಾ ತೆರೆಯುತ್ತಿಲ್ಲ. ಆದ್ದರಿಂದ ಯಾರಾದರೂ ಇಲಾಖಾ ಅಧಿಕಾರಿಗಳು ಮನೆಗೆ ಬಂದಾಗ ಗಾಬರಿಯಾಗುವುದು ಬೇಡ. ಅವರು ಮೌಖಿಕವಾಗಿ ಕೇಳುವ ಪ್ರಶ್ನೆಗಳಿಗೆ ಉತ್ತರಿಸಿ, ಸಹಿ ಹಾಕುವಾಗ ಓದಿ ಸಹಿ ಹಾಕಿ. ಎನ್ಆರ್ಸಿ ಕಾಯ್ದೆ ಅಷ್ಟೊಂದು ಸುಲಭದಲ್ಲಿ ಜಾರಿಯಾಗಲು ನಾವು ಬಿಡುವುದಿಲ್ಲ. ಇದಕ್ಕೆ ಸಂಬಂಧಿಸಿ ಜಿಲ್ಲೆಯ ಜನತೆಗೆ ಸ್ಪಷ್ಟವಾಗಿ ಮಾಹಿತಿ ನೀಡಲಿ ಎಂದು ಹೇಳಿದರು.