ಕರ್ನಾಟಕ

karnataka

ETV Bharat / state

ಸಿಎಎ, ಎನ್​ಆರ್​ಸಿ ವಿರುದ್ಧದ ಪ್ರತಿಭಟನೆ ತಡೆಯದಂತೆ ಪೊಲೀಸರಿಗೆ ಎಚ್ಚರಿಕೆ

ಮಂಗಳೂರಲ್ಲಿ ಮುಸ್ಲಿಂ ಸೆಂಟ್ರಲ್​ ಕಮಿಟಿ ಹಮ್ಮಿಕೊಂಡ ಸಿಎಎ ವಿರುದ್ಧದ ಪ್ರತಿಭಟನೆಗೆ ಪೊಲೀಸರು ಸಹಕರಿಸಬೇಕು. ನಾಗರಿಕರನ್ನು ತಡೆಯುವ ಪ್ರಯತ್ನ ಮಾಡಬಾರದು ಎಂದು ಮಾಜಿ ಶಾಸಕ ಮೊಯಿದ್ದೀನ್​ ಬಾವ ಎಚ್ಚರಿಕೆ ನೀಡಿದ್ದಾರೆ.

By

Published : Jan 15, 2020, 5:40 AM IST

Former MLA M Bawa
ಮಾಜಿ ಶಾಸಕ ಮೊಯಿದ್ದೀನ್​ ಬಾವ

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು (ಜ.15) ನಗರದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗಿಯಾಗುವ ನಾಗರಿಕರಿಗೆ ತೊಂದರೆ ಮಾಡಬೇಡಿ. ಅವರನ್ನು ತಡೆಯ ಬೇಡಿ. ಇದರಿಂದ ಕಾನೂನು ಕೈಗೆತ್ತಿಕೊಳ್ಳಬಹುದು ಎಂದು ಮಾಜಿ ಶಾಸಕ ಮೊಯಿದ್ದೀನ್​ ಬಾವ ಎಚ್ಚರಿಕೆ ನೀಡಿದ್ದಾರೆ.

ಮಾಜಿ ಶಾಸಕ ಮೊಯಿದ್ದೀನ್​ ಬಾವ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡ್ಯಾರ್ ಹೊರವಲಯದಲ್ಲಿ ಮುಸ್ಲಿಂ ಸೆಂಟ್ರಲ್​ ಕಮಿಟಿ ಹಮ್ಮಿಕೊಂಡ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಹೊರ ಜಿಲ್ಲೆಗಳಿಂದಲೂ ಅನೇಕ ನಾಗರಿಕರು ಭಾಗವಹಿಸಿದ್ದಾರೆ. ಅವರನ್ನು ಎಲ್ಲಿಯೂ ತಡೆಗಟ್ಟುವ ಪ್ರಯತ್ನಕ್ಕೆ ಪೊಲೀಸರು ಮುಂದಾಗಬಾರದು. ಅವರಿಗೆ ಸಮಸ್ಯೆಯಾದರೆ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುತ್ತದೆ. ದಯಮಾಡಿ ಅವರನ್ನು ತಡೆಯ ಬೇಡಿ ಎಂದು ಮನವಿ ಮಾಡಿದ್ದಾರೆ.

ಪೊಲೀಸ್​ ಅಧಿಕಾರಿಗಳು ಪ್ರತಿಭಟನೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ABOUT THE AUTHOR

...view details