ಮಂಗಳೂರು:ನಗರದಲ್ಲಿ ಜನದಟ್ಟಣೆ, ವಾಹನದಟ್ಟಣೆ ಇಂದು ಬಹಳ ವಿರಳವಾಗಿದ್ದು, ವಾರಾಂತ್ಯ ಕರ್ಫ್ಯೂಗೆ ಮಂಗಳೂರಿನ ಜನತೆಯಿಂದ ಸಂಪೂರ್ಣ ಬೆಂಬಲ ದೊರಕಿದೆ.
ವೀಕೆಂಡ್ ಕರ್ಫ್ಯೂ ಹಿನ್ನೆಲೆ ಕಡಲನಗರಿ ಸಂಪೂರ್ಣ ಸ್ತಬ್ಧ - ಕೊರೊನಾವೈರಸ್ ಸುರಕ್ಷತೆ
ರಾಜ್ಯದಲ್ಲಿ ಕೊರೊನಾ ತಡೆಗೆ ವಾರಾಂತ್ಯ ಕರ್ಫ್ಯೂ ಹೇರಲಾಗಿದ್ದು, ಮಂಗಳೂರಿನಲ್ಲಿ ಉತ್ತಮ ಬೆಂಬಲ ದೊರಕಿದೆ. ಬೆಳಗ್ಗೆ 9 ಗಂಟೆಯ ಬಳಿಕ ಎಲ್ಲವೂ ಬಂದ್ ಆಗಿದ್ದು, ಕಡಲನಗರಿ ಸಂಪೂರ್ಣ ಸ್ತಬ್ಧಗೊಂಡಿದೆ.
![ವೀಕೆಂಡ್ ಕರ್ಫ್ಯೂ ಹಿನ್ನೆಲೆ ಕಡಲನಗರಿ ಸಂಪೂರ್ಣ ಸ್ತಬ್ಧ Weekend Curfew in Mangalore](https://etvbharatimages.akamaized.net/etvbharat/prod-images/768-512-11683307-thumbnail-3x2-mng.jpg)
ವೀಕೆಂಡ್ ಕರ್ಫ್ಯೂ ಹಿನ್ನೆಲೆ ಕಡಲನಗರಿ ಸಂಪೂರ್ಣ ಸ್ತಬ್ಧ
ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನಿಯಮಾವಳಿ ಜೊತೆಗೆ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗಿದ್ದು, ಈ ಹಿನ್ನೆಲೆಯಲ್ಲಿ ಅನಗತ್ಯ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಬೆಳಗ್ಗೆ 6ರಿಂದ 9ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಸಡಿಲಿಕೆ ಇದ್ದು, ಈ ಸಂದರ್ಭ ಜನ ಸಂಚಾರವಿದ್ದರೂ, ಆ ಬಳಿಕ ರಸ್ತೆಯಲ್ಲಿ ಜನ ಸಂಚಾರ ಕಡಿಮೆಯಾಗಿದೆ.
ಪೊಲೀಸರು ಅಲ್ಲಲ್ಲಿ ಬ್ಯಾರಿಕೇಡ್ ಹಾಕಿಕೊಂಡು ಸಂಚಾರ ನಡೆಸುವವರನ್ನು ವಿಚಾರಣೆ ನಡೆಸಿ ಬಿಡುತ್ತಿದ್ದಾರೆ. ಇಂದು ಮಾತ್ರ ಎಂದಿಗಿಂತ ಜನ ಸಂಚಾರ ಡಿಮೆಯಾಗಿದೆ. ಬೆಳಗ್ಗೆ 9 ಗಂಟೆಯ ಬಳಿಕ ಎಲ್ಲವೂ ಬಂದ್ ಆಗಿದ್ದು, ಕಡಲನಗರಿ ಸಂಪೂರ್ಣ ಸ್ತಬ್ಧಗೊಂಡಿದೆ.