ಕರ್ನಾಟಕ

karnataka

ಪ್ರಶ್ನಿಸುವ ಧ್ವನಿ ಇಲ್ಲದವರಿಗೆ ಸಂಸದ, ಮಂತ್ರಿ ಸ್ಥಾನ ಯಾಕೆ: ಡಿಕೆಶಿ

By

Published : Apr 15, 2019, 3:16 PM IST

ದ.ಕ ಜಿಲ್ಲೆಗೆ ನಳಿನ್ ಕುಮಾರ್ ಕೊಡುಗೆ ಏನು? ಸಂಸದರಾಗಿ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳೇನು ಎಂದು ಸಚಿವ ಡಿ.ಕೆ.ಶಿವಕುಮಾರ್​ ಪ್ರಶ್ನಿಸಿದ್ದಾರೆ.

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್

ಮಂಗಳೂರು:ಹತ್ತು ವರ್ಷಗಳಿಂದ ಸಂಸದರಾಗಿದ್ದ ನಳಿನ್ ಕುಮಾರ್ ಜಿಲ್ಲೆಗೆ ಮಾಡಿದ ಅಭಿವೃದ್ಧಿ ಕಾರ್ಯಗಳಾದರೂ ಏನು? ಸಂಸತ್ತಿನಲ್ಲಿ ಎಷ್ಟು ಬಾರಿ ಧ್ವನಿ ಎತ್ತಿದ್ದಾರೆ, ಆ ಧ್ವನಿಗೆ ಸಿಕ್ಕ ಫಲವಾದ್ರೂ ಏನು ? ದ.ಕ. ಜಿಲ್ಲೆಗೆ ಅವರ ಕೊಡುಗೆ ಏನು ಎಂದು ಸಚಿವ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ಡಿ.ಕೆ.ಶಿವಕುಮಾರ್

ನಗರದ ಮಲ್ಲಿಕಟ್ಟೆಯಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ವಿಜಯ ಬ್ಯಾಂಕ್ ವಿಲೀನದ ಬಗ್ಗೆ ಶೋಭಾ ಕರಂದ್ಲಾಜೆ, ಸದಾನಂದಗೌಡ ಹಾಗೂ ನಳಿನ್ ಕುಮಾರ್ ಕಟೀಲು ಸಂಸತ್ತಿನಲ್ಲಿ ಧ್ವನಿ ಎತ್ತಿಲ್ಲ. ಎತ್ತಿದ್ದರೆ ನಮ್ಮ ಸ್ವಾಭಿಮಾನದ ಸಂಕೇತವಾಗಿದ್ದ ವಿಜಯ ಬ್ಯಾಂಕ್ ಕೈ ಬಿಟ್ಟು ಹೋಗುತ್ತಿರಲಿಲ್ಲ. ಆ ಧ್ವನಿಯೇ ಇಲ್ಲ ಅಂದ ಮೇಲೆ ಇನ್ನು ಸಂಸತ್ ಸದಸ್ಯ, ಮಂತ್ರಿ ಸ್ಥಾನ ಉಳಿಸಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದ್ರು.

ಮಂಗಳೂರಿಗೆ ಅಮೃತ್ ಯೋಜನೆ, ಸ್ಮಾರ್ಟ್ ಸಿಟಿ ಯೋಜನೆಗಳನ್ನು ಕೊಟ್ಟಿದ್ದೇವೆ ಎಂದು ಹೇಳುತ್ತಿದ್ದಾರೆ. ಆದ್ರೆ ಹೆಸರು ಮಾತ್ರ ಇದೆ. ಇನ್ನೂ ಹಣ ಬಂದಿಲ್ಲ. ಆದ್ದರಿಂದ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಅಚ್ಚೇ ದಿನ್​​ ಎಂಬ ಮಾತುಗಳು ಈಗ ನಿಂತುಹೋಗಿವೆ. ಯಾರಿಗೂ ಯಾವ ಅಚ್ಚೇ ದಿನವೂ ಬಂದಿಲ್ಲ.

ಈ‌ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಬದಲಾವಣೆ ತರಬೇಕೆಂದು ಒಬ್ಬ ವಿದ್ಯಾವಂತ ಯುವಕನಿಗೆ ಮೈತ್ರಿ ಸರ್ಕಾರ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದೆ. ಆದ್ದರಿಂದ ತಾವೆಲ್ಲರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈಯವನ್ನು ಬಹಮತದಿಂದ ಆಯ್ಕೆ ಮಾಡಬೇಕೆಂದು ಡಿಕೆಶಿ ವಿನಂತಿಸಿಕೊಂಡ್ರು.

ABOUT THE AUTHOR

...view details