ಕರ್ನಾಟಕ

karnataka

ETV Bharat / state

ಮಾಸ್ಕ್ ಹಾಕದ್ದನ್ನು ಪ್ರಶ್ನಿಸಿದ್ದಕ್ಕೆ ಪಿಡಿಒ ಮೇಲೆ ಹಲ್ಲೆ - ಮಾಸ್ಕ್​ ವಿಚಾರಕ್ಕೆ ಪಿಡಿಒ ಮೇಲೆ ಹಲ್ಲೆ

ಮಾಸ್ಕ್​ ಹಾಕದೇ ಗುಂಪು- ಗುಂಪಾಗಿದ್ದಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಪಿಡಿಒ ಮೇಲೆ ಯುವಕರು ಹಲ್ಲೆ ನಡೆಸಿದ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ.

attack
attack

By

Published : May 25, 2021, 8:09 PM IST

ಮಂಗಳೂರು;ಮಾಸ್ಕ್ ಧರಿಸದೇ ಇರುವುದನ್ನು ಪ್ರಶ್ನಿಸಿದ ಮಂಗಳೂರಿನ ಮಲ್ಲೂರು ಗ್ರಾಮ ಪಂಚಾಯತ್​​ ಪಿಡಿಒ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಮಲ್ಲೂರು ಗ್ರಾಮ ಪಂಚಾಯತ್​ನ ಪಿಡಿಒ ರಾಜೇಂದ್ರ ಶೆಟ್ಟಿ ಅವರು ಮಲ್ಲೂರು ಬಳಿ ಬದ್ರಿಯಾನಗರದ ಕ್ರಿಕೆಟ್ ಮೈದಾನದಲ್ಲಿ ಗುಂಪು ಸೇರಿದ್ದ ಯುವಕರಿಗೆ ಮಾಸ್ಕ್ ಹಾಕಲು ಸೂಚಿಸಿದ್ದರು.

ಬಳಿಕ ಇದೇ ಯುವಕರು ಮಲ್ಲೂರು ಗ್ರಾಮ ಪಂಚಾಯತ್ ಆವರಣದಲ್ಲಿ ಸೇರಿದ್ದು, ಅಲ್ಲಿಯೂ ಅವರು ಮಾಸ್ಕ್ ಹಾಕದೇ ಗುಂಪು - ಗುಂಪಾಗಿದ್ದನ್ನು ಪ್ರಶ್ನಿಸಿದರು. ಈ ವೇಳೆ, ಯುವಕರಿಬ್ಬರು ಪಿಡಿಒ ಮೇಲೆ ಹಲ್ಲೆ ನಡೆಸಿದ್ದಾರೆ. ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details