ಕರ್ನಾಟಕ

karnataka

ಅಪಘಾತದಲ್ಲಿ ಗಾಯಗೊಂಡ ಯುವತಿ : ಆಸ್ಪತ್ರೆಗೆ ಸಾಗಿಸಲು ನೆರವಾದ ಬಿಜೆಪಿ ರಾಜ್ಯಾಧ್ಯಕ್ಷ

By

Published : Jan 14, 2021, 9:08 PM IST

Updated : Jan 14, 2021, 9:47 PM IST

ಗುರುಪುರ ಸೇತುವೆ ಬಳಿ ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಯುವತಿವೋರ್ವಳು ಗಾಯಗೊಂಡಿದ್ದಳು. ಈ ಸಂದರ್ಭದಲ್ಲಿ ಅದೇ ದಾರಿಯಲ್ಲಿ ತೆರಳುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು​​ ತಕ್ಷಣ ಕಾರಿನಿಂದ ಇಳಿದು ಯುವತಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.

BJP state President Nalin Kumar Kateel
ಆಸ್ಪತ್ರೆಗೆ ಸಾಗಿಸಲು ನೆರವಾದ ಬಿಜೆಪಿ ರಾಜ್ಯಾಧ್ಯಕ್ಷ

ಮಂಗಳೂರು:ನಗರದ ಹೊರವಲಯದಲ್ಲಿರುವ ಗುರುಪುರ ಸೇತುವೆ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​​ ಮಾನವೀಯತೆ ತೋರಿದ್ದಾರೆ.

ಗಾಯಗೊಂಡ ಯುವತಿ ಆಸ್ಪತ್ರೆಗೆ ಸಾಗಿಸಲು ನೆರವಾದ ಬಿಜೆಪಿ ರಾಜ್ಯಾಧ್ಯಕ್ಷ

ಗುರುಪುರ ಸೇತುವೆ ಬಳಿ ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಯುವತಿವೋರ್ವಳು ಗಾಯಗೊಂಡಿದ್ದಳು. ಈ ಸಂದರ್ಭದಲ್ಲಿ ಅದೇ ದಾರಿಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು​​ ಗುರುಪುರ ಮೂಲಕ ಕಂದಾವರಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ತಕ್ಷಣ ಕಾರಿನಿಂದ ಇಳಿದ ನಳಿನ್ ಕುಮಾರ್ ಕಟೀಲ್​ ಯುವತಿಯನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.

ಓದಿ:ಮಂಗಳೂರಿನ ಹಳೆಯ ಐಸ್ ಪ್ಲ್ಯಾಂಟ್​ನಲ್ಲಿ ಅಮೋನಿಯಾ ‌ಸೋರಿಕೆ : ಕೆಲ ಕಾಲ ಆತಂಕ ಸೃಷ್ಟಿ

ಗಾಯಾಳು ಯುವತಿಯ ತಲೆ ಮತ್ತು ಹಣೆಗೆ ಪೆಟ್ಟಾಗಿತ್ತು. ಕೂಡಲೇ ಅವರು ಆಟೋರಿಕ್ಷಾವೊಂದರಲ್ಲಿ ಆಕೆಯನ್ನು ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಇದೀಗ ನಳಿನ್ ಕುಮಾರ್ ಕಟೀಲ್​​ ಅವರ ಈ ಮಾನವೀಯ ಕಾರ್ಯದ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.

Last Updated : Jan 14, 2021, 9:47 PM IST

ABOUT THE AUTHOR

...view details