ಕಡಬ: ಸಹೋದರರ ನಡುವೆ ಜಗಳ ನಡೆದು ಅಣ್ಣನಿಗೆ ಸ್ವಂತ ತಮ್ಮನೇ ಚಾಕುವಿನಿಂದ ಇರಿದ ಘಟನೆ ತಾಲೂಕಿನ ಮೂಜೂರು ಎಂಬಲ್ಲಿ ಇಂದು ಸಂಜೆ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ಕಡಬ ತಾಲೂಕಿನ ಐತ್ತೂರು ಗ್ರಾಮದ ಮೂಜೂರು ಸಮೀಪದ ಮುಂಡಡ್ಕ ನಿವಾಸಿ ಧ್ರುವ ಕುಮಾರ್(35) ಎಂದು ಗುರುತಿಸಲಾಗಿದೆ. ಸಹೋದರರ ನಡುವೆ ಇಂದು ಸಂಜೆ ಜಗಳವುಂಟಾಗಿ ತಮ್ಮ ಪ್ರೀತಮ್ ಎಂಬಾತ ಅಣ್ಣನಿಗೆ ಚಾಕುವಿನಿಂದ ಇರಿದಿರುವುದಾಗಿ ತಿಳಿದುಬಂದಿದೆ.