ಕರ್ನಾಟಕ

karnataka

ಸೇತುವೆ ಮೇಲಿಂದ ಉರುಳಿದ ಕಾರು.. ಚಾಲಕ ಬಲಿ

By

Published : Feb 10, 2021, 4:50 PM IST

ಹರ್ಷಿತ್ (27) ಸಾವನ್ನಪ್ಪಿದ ಕಾರು ಚಾಲಕ ಎಂದು ಗುರುತಿಸಲಾಗಿದ್ದು, ಚಾಲಕ ಹರ್ಷಿತ್ ಹೊನ್ನಾಳಿ ತಾಲೂಕಿನ ರಾಂಪುರ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಗೊಲ್ಲರಹಳ್ಳಿಯಿಂದ ಹೊನ್ನಾಳಿಗೆ ಬರುವಾಗ ಈ ದುರ್ಘಟನೆ ನಡೆದಿದೆ.

a-car-toppled-over-the-bridge-driver-died
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಉರುಳಿದ ಕಾರು..ಚಾಲಕ ಬಲಿ

ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಬ್ರಿಡ್ಜ್ ಮೇಲಿಂದ ಕಾರೊಂದು ಕೆಳಗೆ ಬಿದ್ದು, ಚಾಲಕ ಸಾವನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ತುಂಗಭದ್ರಾ ನದಿಯ ಬ್ರಿಡ್ಜ್ ಬಳಿ ನಡೆದಿದೆ.

ಹರ್ಷಿತ್ (27) ಸಾವನ್ನಪ್ಪಿದ ಕಾರು ಚಾಲಕ ಎಂದು ಗುರುತಿಸಲಾಗಿದ್ದು, ಹೊನ್ನಾಳಿ ತಾಲೂಕಿನ ರಾಂಪುರ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಗೊಲ್ಲರಹಳ್ಳಿಯಿಂದ ಹೊನ್ನಾಳಿಗೆ ಬರುವಾಗ ಈ ದುರ್ಘಟನೆ ನಡೆದಿದೆ.

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಉರುಳಿದ ಕಾರು

ತೀವ್ರ ಗಾಯಗೊಂಡಿದ್ದ ಹರ್ಷಿತ್​​​ನನ್ನು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಘಟನಾ ಸ್ಥಳಕ್ಕೆ ಹೊನ್ನಾಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಚಾಲಕನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.

ಇದನ್ನೂ ಓದಿ:ಲೈವ್​ ವಿಡಿಯೋ: ಕೆನಾಲ್​ನಲ್ಲಿ ಕೊಚ್ಚಿ ಹೋದ ಕಾರು, ಮೂವರು ಸಾವು.. ಸಾವಿಗೂ ಮುನ್ನ ಲಿಫ್ಟ್​ ಕೇಳಿದ್ಲು ಶಿಕ್ಷಕಿ!

ABOUT THE AUTHOR

...view details