ಕರ್ನಾಟಕ

karnataka

ETV Bharat / state

ಕಾಲೇಜ್​ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು... ಕಾರಣ ನಿಗೂಢ!

ನಗರದ ಹೊರವಲಯದಲ್ಲಿರುವ ಕಾಲೇಜು ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

By

Published : Apr 22, 2021, 9:00 AM IST

student suicide in College hostel, student suicide in College hostel in Davanagere, Davanagere crime news, ಕಾಲೇಜ್​ ಹಾಸ್ಟೇಲ್​ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ, ದಾವಣಗೆರೆಯಲ್ಲಿ ಕಾಲೇಜ್​ ವಿದ್ಯಾರ್ಥಿನಿ ಆತ್ಮಹತ್ಯೆ, ದಾವಣಗೆರೆ ಅಪರಾಧ ಸುದ್ದಿ,
ಕಾಲೇಜ್​ ಹಾಸ್ಟೇಲ್​ನಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು

ದಾವಣಗೆರೆ:ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಬಳಿಯಿರುವ ವೈಷ್ಣವಿ ಚೇತನ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ.

ಸಿಂಧು (17) ನೇಣಿಗೆ ಶರಣಾದ ಬಾಲಕಿ. ಮೃತ ಬಾಲಕಿ ಪಿಯುಸಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ನಿವಾಸಿ ಎಂದು ತಿಳಿದು ಬಂದಿದೆ.

ಕಳೆದ ಕೆಲ ತಿಂಗಳಿಂದ ಕಾಲೇಜು ವಸತಿ ನಿಲಯದಲ್ಲಿದ್ದ ಬಾಲಕಿ ನೇಣಿಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.‌ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಬಳಿಕ ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.

ಕಾಲೇಜು ಆಡಳಿತ ಮಂಡಳಿ ಮೃತ ಸಿಂಧು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದೆ. ಮಾಹಿತಿ ತಿಳಿದು ಕಾಲೇಜಿನತ್ತ ಇಡೀ ಕುಟುಂಬವೇ ದೌಡಾಯಿಸಿದೆ. ಮಗಳ ಸಾವು ಕಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಈ ಘಟನೆ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ABOUT THE AUTHOR

...view details