ಹರಿಹರ :ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಸಂಘಟನೆ (ಎಐಯುಟಿಸಿ)ಯ ಆದೇಶದ ಮೇರೆಗೆ ಆಶಾ ಕಾರ್ಯಕರ್ತೆಯರು ಶಾಸಕ ಎಸ್ ರಾಮಪ್ಪ ಹಾಗೂ ತಹಶೀಲ್ದಾರ್ ಕೆ ಬಿ ರಾಮಚಂದ್ರಪ್ಪ ಅವರಿಗೆ ಮನವಿ ಸಲ್ಲಿಸಿದರು.
ನಗರದ ಹಳ್ಳದಕೇರಿಯಲ್ಲಿರುವ ಶಾಸಕ ಎಸ್ ರಾಮಪ್ಪ ಅವರ ನಿವಾಸಕ್ಕೆ ತೆರಳಿ ಆಶಾ ಕಾರ್ಯಕರ್ತೆಯರು ಹಾಗೂ ಮುಖಂಡರು ಮನವಿ ಸಲ್ಲಿಸಿದರು. ಬಳಿಕ ಮಾತನಾಡಿದ ಮುಖಂಡರು, ಕಳೆದ ನಾಲ್ಕೈದು ತಿಂಗಳಿಂದ ರಾಜ್ಯಾದ್ಯಂತ ಕೊರೊನಾ ವೈರಸ್ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯೊಂದಿಗೆ ಹಗಲಿರುಳು ಎನ್ನದೆ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ.