ಕರ್ನಾಟಕ

karnataka

ETV Bharat / state

'ಭಾಗ್ಯಗಳ ಹೆಸರು ಹೇಳಿ ಟೋಪಿ ಹಾಕಿದ್ದಕ್ಕೆ ಜನ ''ಅವರನ್ನು''ಮನೆಗೆ ಕಳುಹಿಸಿದ್ದಾರೆ' - ಸಿದ್ದರಾಮಯ್ಯ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ

ಭಾಗ್ಯ ಭಾಗ್ಯ ಅಂತಾ ಜನರಿಗೆ ಟೋಪಿ ಹಾಕಿದ್ದಕ್ಕೆ ಜನ ಸಿದ್ದರಾಮಯ್ಯನವರನ್ನು ಮನೆಗೆ ಕಳುಹಿಸಿದ್ದಾರೆ ಎಂದು ಸಚಿವ ಬಸವರಾಜ ಬೊಮ್ಮಾಯಿವ ವ್ಯಂಗ್ಯವಾಡಿದ್ದಾರೆ.

basavaraj bommai outrage on siddaramaiah
ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ

By

Published : Feb 9, 2020, 8:10 PM IST

ದಾವಣಗೆರೆ: ದರಿದ್ರ ಸರ್ಕಾರ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಮಾತನಾಡಿದ ಅವರು, ಭಾಗ್ಯ, ಭಾಗ್ಯ ಅಂತಾ ಜನರಿಗೆ ಟೋಪಿ ಹಾಕಿದ್ದಕ್ಕೆ ಅವರನ್ನು ಮನೆಗೆ ಕಳುಹಿಸಿದ್ದಾರೆ ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಸರ್ಕಾರ ಭಾಗ್ಯದ ಹೆಸರಲ್ಲಿ ಕರ್ನಾಟಕದ ಜನರಿಗೆ ಟೋಪಿ ಹಾಕಿದ್ದರು. ಸೋತ ಕಾರಣ ಹತಾಶೆಗೊಂಡು ಈ ರೀತಿ ಮಾತನಾಡುತ್ತಿದ್ದಾರೆ.‌ ಅವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದರು.

ಸಚಿವ ಬಸವರಾಜ ಬೊಮ್ಮಾಯಿ ಹೇಳಿಕೆ

ಯಾರ್ಯಾರಿಗೆ ಯಾವ ಖಾತೆ ನೀಡಬೇಕೆಂಬ ಬಗ್ಗೆ ಸಿಎಂ ಯಡಿಯೂರಪ್ಪ ನಿರ್ಧಾರ ಕೈಗೊಳ್ಳುತ್ತಾರೆ. ಈಗಾಗಲೇ ಅವರೇ ಹೇಳಿದ್ದಾರೆ. ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲ್ಲ ಎಂದ ಅವರು ಲ್ಯಾಪ್ ಟಾಪ್ ಉಚಿತವಾಗಿ ನೀಡದಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರ ಯಾವ ರೀತಿ ಕ್ರಮ ಕೈಗೊಂಡಿಲ್ಲ ಎಂದು ಹೇಳಿದರು.

ABOUT THE AUTHOR

...view details