ದಾವಣಗೆರೆ: ಜಮೀನಿಗೆ ತೆರಳಿದ್ದ ವೇಳೆ ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಕೆಳಗೋಟೆ ಗ್ರಾಮದಲ್ಲಿ ನಡೆದಿದೆ.
ದಾವಣಗೆರೆಯಲ್ಲಿ ರೈತನ ಮೇಲೆ ಕರಡಿ ದಾಳಿ.. ಗಾಯಾಳು ಜಿಲ್ಲಾಸ್ಪತ್ರೆಗೆ ದಾಖಲು
ಜಮೀನಿಗೆ ತೆರಳಿದ್ದ ವೇಳೆ ರೈತನ ಮೇಲೆ ಕರಡಿ ದಾಳಿ ನಡೆಸಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಕೆಳಗೋಟೆ ಗ್ರಾಮದಲ್ಲಿ ನಡೆದಿದೆ.
ರೈತನ ಮೇಲೆ ಕರಡಿ ದಾಳಿ
ಗಾಯಾಳು ತಿಪ್ಪೇಸ್ವಾಮಿ(44), ಜಮೀನಿಗೆ ಹೋದ ವೇಳೆ ಕರಡಿ ದಾಳಿ ಮಾಡಿದೆ. ಈ ವೇಳೆ ಸ್ಥಳೀಯರು ರಕ್ಷಣೆ ಮಾಡಿದ್ದು, ತೀವ್ರ ಗಾಯಗೊಂಡ ರೈತನನ್ನು ಜಗಳೂರು ತಾಲೂಕು ಆಸ್ಪತ್ರೆ ಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.