ದಾವಣಗೆರೆ: ಶಾಲಾ ವಾಹನದಿಂದ ಬಿದ್ದು ನಾಲ್ಕು ವರ್ಷದ ಬಾಲಕ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಚನ್ನಗಿರಿ ತಾಲೂಕಿನ ಸಾರಥಿ ಗ್ರಾಮದ ಬಳಿ ನಡೆದಿದೆ.
4 ವರ್ಷದ ಅಜಯ್ ಮೃತ ಬಾಲಕ ಎಂದು ತಿಳಿದುಬಂದಿದೆ. ಶಾಲೆಗೆ ಹೋಗಿದ್ದ ವಿದ್ಯಾರ್ಥಿ ವಾಪಸ್ ಮನೆಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಬಸ್ನಿಂದ ಕೆಳಗಿಳಿಯುಷ್ಟರಲ್ಲಿ ಚಾಲಕ ವಾಹನವನ್ನು ಮುಂದಕ್ಕೆ ಚಲಾಯಿಸಿದ್ದಕ್ಕೆ, ಬಾಲಕ ವಾಹನ ಚಕ್ರದಲ್ಲಿ ಸಿಲುಕಿ ಸಾವನ್ನಪ್ಪಿದ್ದಾನೆ.