ಕರ್ನಾಟಕ

karnataka

ETV Bharat / state

ಗ್ರಾಮಸ್ಥರ ಅನುಮಾನ ಬಗೆಹರಿಸಲು ಕೊರೊನಾ ಪರೀಕ್ಷೆ ನಡೆಸಿದ ಆರೋಗ್ಯ ಸಿಬ್ಬಂದಿಗಳು - ಗ್ರಾಮಸ್ಥರ ಅನುಮಾನ ಬಗೆಹರಿಸಲು ಕೊರೊನಾ ಪರೀಕ್ಷೆ ನಡೆಸಿದ ಆರೋಗ್ಯ ಸಿಬ್ಬಂದಿಗಳು

ಹರಿಹರ ತಾಲೂಕಿನ ಕೆಲ ಗ್ರಾಮಗಳಿಗೆ ಹೊರ ಜಿಲ್ಲೆ ಮತ್ತು ರಾಜ್ಯಗಳಿಂದ ಕೆಲ ಜನರು ಬಂದಿದ್ದಾರೆ. ಹೀಗೆ ಬೇರೆಡೆಯಿಂದ ಗ್ರಾಮಕ್ಕೆ ಬಂದವರಿಗೆ ಕೊರೊನಾ ಪರೀಕ್ಷೆ ನಡೆಸುವಂತೆ ಆರೋಗ್ಯಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

By

Published : Mar 31, 2020, 11:42 AM IST

ಹರಿಹರ: ಹೊರ ರಾಜ್ಯ ಮತ್ತು ಬೆಂಗಳೂರಿನಿಂದ ಕೆಲ ವ್ಯಕ್ತಿಗಳು ತಾಲೂಕಿನ ವಾಸನ ಗ್ರಾಮಕ್ಕೆ ಆಗಮಿಸಿದ್ದು, ಅವರಿಗೆ ಕೊರೊನಾ ಇರಬಹುದೆಂಬ ಶಂಕೆ ವ್ಯಕ್ತಪಡಿಸಿದ್ದಾರೆ ಗ್ರಾಮಸ್ಥರು.

ಇತ್ತೀಚೆಗೆ ಕೇರಳದಿಂದ ವ್ಯಕ್ತಿಯೊಬ್ಬ ಗ್ರಾಮಕ್ಕೆ ಆಗಮಿಸಿದ್ದು, ಆತನಿಗೆ ಕೊರೊನಾ ಸೋಂಕು ತಗುಲಿರಬಹುದೆಂದು ಶಂಕೆ ವ್ಯಕ್ತಪಡಿಸಿದ ಗ್ರಾಮಸ್ಥರು ಆತನನ್ನು ಪ್ರತ್ಯೇಕವಾಗಿರಿಸಿದ್ದಾರೆ. ಈ ವಿಷಯ ತಿಳಿದು ತಕ್ಷಣ ಕಾರ್ಯಪ್ರವೃತ್ತರಾದ ತಾಲೂಕು ಆರೋಗ್ಯಾಧಿಕಾರಿ ಚಂದ್ರಮೋಹನ್ ಅವರು ತಮ್ಮ ಸಿಬ್ಬಂದಿಗೆ ದೂರವಾಣಿ ಮೂಲಕ ಕರೆ ಮಾಡಿ ತಕ್ಷಣ ವಾಸನ ಗ್ರಾಮಕ್ಕೆ ತೆರಳಿ ಅಲ್ಲಿನ ಪರಿಸ್ಥಿತಿ ಅರಿತು ಕ್ರಮಕೈಗೊಳ್ಳಲು ಸೂಚಿಸಿದ್ದಾರೆ. ಹೀಗಾಗಿ ಸಿಬ್ಬಂದಿ ಗ್ರಾಮಕ್ಕೆ ತೆರಳಿ ಗ್ರಾಮಸ್ಥರನ್ನು ಭೇಟಿಯಾಗಿ ಮಾತಕತೆ ನಡೆಸಿದರು. ಶಂಕಿತ ವ್ಯಕ್ತಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸಿ ಕೊರೊನಾ ಇಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ಹೀಗಾಗಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಇನ್ನು ಬೆಂಗಳೂರಿನಿಂದಲೂ ಜನರು ಗ್ರಾಮಕ್ಕೆ ಆಗಮಿಸಿದ್ದು, ಅವರನ್ನೂ ಪರೀಕ್ಷೆಗೆ ಒಳಪಡಿಸಬೇಕೆಂದು ಜನ ಪಟ್ಟು ಹಿಡಿದ ಹಿನ್ನೆಲೆ ಸುಮಾರು 50 ಜನರನ್ನು ಪರೀಕ್ಷೆಗೆ ಒಳಪಡಿಸಿ ಕೊರೊನಾ ಇಲ್ಲ ಎಂಬುದನ್ನು ಖಚಿತಪಡಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಡಾ.ಎಸ್.ಹೆಚ್. ಪಾಟೀಲ್, ಡಾ. ನೇತ್ರಾ, ಹಿರಿಯ ಆರೋಗ್ಯ ಸಹಾಯಕ ಎಂ.ವಿ. ಹೊರಕೇರಿ, ಮಂಜುನಾಥ್, ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಗಳು ಭಾಗವಹಿಸಿದ್ದರು.

For All Latest Updates

TAGGED:

ABOUT THE AUTHOR

...view details